ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ: ವಾಹನ ಸವಾರರಿಗೆ ಡಿಸಿಎಂ ಎಚ್ಚರಿಕೆ

ವಾಹನ ಟೋಯಿಂಗ್ ವಿರುದ್ಧ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ 2022ರ ಫೆಬ್ರವರಿಯಲ್ಲಿ ಟೋಯಿಂಗ್ ಅನ್ನು ಸ್ಥಿಗತಗೊಳಿಸಲಾಗಿತ್ತು.

ಬೆಂಗಳೂರು: ಬೆಂಗಳೂರಿನಲ್ಲಿ 2022 ರಲ್ಲಿ ಸ್ಥಗಿತಗೊಂಡಿದ್ದ ವಾಹನಗಳ ಟೋಯಿಂಗ್‌ ಅನ್ನು ಮತ್ತೆ ಆರಂಭವಾಗಲಿದ್ದು, ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಇಂದು ಸುರಂಗ ರಸ್ತೆ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ಟೋಯಿಂಗ್​ ಮತ್ತೆ ಆರಂಭಿಸುವುದಾಗಿ ಹೇಳಿದ್ದಾರೆ.

ರಸ್ತೆಗಳ ಮೇಲೆ ನಿಲ್ಲಿಸಿದ ವಾಹನಗಳನ್ನು ಟೋಯಿಂಗ್ ಮಾಡುತ್ತೇವೆ. 21 ದಿನಗಳಲ್ಲಿ ಆ ವಾಹನಗಳನ್ನು ಹರಾಜು ಹಾಕುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ವಾಹನ ಟೋಯಿಂಗ್ ವಿರುದ್ಧ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ 2022ರ ಫೆಬ್ರವರಿಯಲ್ಲಿ ಟೋಯಿಂಗ್ ಬಂದ್ ಆಗಿತ್ತು. ಕೆಲವು ಹೊಸ ನಿಯಮ, ಗೈಡ್ ಲೈನ್ಸ್​ನೊಂದಿಗೆ ಟೋಯಿಂಗ್ ಪ್ರಾರಂಭಿಸಲಾಗುವುದು ಎಂದು ಈ ಹಿಂದಿನ ಸರ್ಕಾರ ಹೇಳಿತ್ತು. ಆದರೆ, ಮತ್ತೆ ಟೋಯಿಂಗ್ ಪ್ರಾರಂಭವಾಗಿರಲಿಲ್ಲ. ಇದೀಗ ಮತ್ತೆ ಟೋಯಿಂಗ್​ ಆರಂಭಿಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಟ್ರಾಫಿಕ್​ ಸಮಸ್ಯೆಗೆ ಕಡಿವಾಣ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಮೆಟ್ರೋ ಕಾಮಗಾರಿಗಳ ಪಕ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಮಾಡುತ್ತೇವೆ. ಇದರಿಂದ ಟ್ರಾಫಿಕ್ ಸಮಸ್ಯೆ ಕಡಿಮೆಯಾಗುತ್ತದೆ. ಟನಲ್‌ ರೋಡ್​​ ನಿರ್ಮಾಣಕ್ಕೆ ಬಿಜೆಪಿ ಮತ್ತು ಜೆಡಿಎಸ್​ನ ಎಲ್ಲ ಶಾಸಕರ ಬೆಂಬಲ ಇದೆ ಎಂದು ಡಿಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT