ಅಲೋಕ್ ಕುಮಾರ್ 
ರಾಜ್ಯ

2019ರ ಆಡಿಯೋ ಲೀಕ್ ಪ್ರಕರಣ: IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ನೋಟಿಸ್ ಗೆ CAT ತಡೆ!

ಮಾಹಿತಿ ಹಕ್ಕು ಕಾಯಿದೆಯಡಿ ರಾಜ್ಯ ಸರ್ಕಾರವು 2024 ರ ಮೇ 6 ರಂದು ನೀಡಿದ ಉತ್ತರದ ಪ್ರಕಾರ ಇಲಾಖಾ ತನಿಖೆಯನ್ನು ಈಗಾಗಲೇ ಕೈಬಿಡಲಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಈ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಸಿದೆ.

ಬೆಂಗಳೂರು: 2019ರ ಆಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ತನಿಖೆಗೆ ಸೂಚಿಸಿ ಮುಖ್ಯ ಕಾರ್ಯದರ್ಶಿ ನೀಡಿದ್ದ ನೋಟಿಸ್‌ಗೆ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (CAT) ತಡೆ ನೀಡಿದೆ.

ಮಾಹಿತಿ ಹಕ್ಕು ಕಾಯಿದೆಯಡಿ ರಾಜ್ಯ ಸರ್ಕಾರವು 2024 ರ ಮೇ 6 ರಂದು ನೀಡಿದ ಉತ್ತರದ ಪ್ರಕಾರ ಇಲಾಖಾ ತನಿಖೆಯನ್ನು ಈಗಾಗಲೇ ಕೈಬಿಡಲಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಈ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಸಿದೆ. ಆಡಿಯೋ ಲೀಕ್ ಗೆ ಸಂಬಂಧಿಸಿದಂತೆ ತನ್ನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಬಿಐ ನಿರ್ಣಾಯಕವಾಗಿ ದೃಢಪಡಿಸಿದೆ ಎಂದು ಅಲೋಕ್ ಕುಮಾರ್ ವಾದಿಸಿದ್ದಾರೆ.

ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಲು ಇಲಾಖಾ ಬಡ್ತಿ ಸಮಿತಿ ತನ್ನ ಹೆಸರನ್ನು ಅಂತಿಮಗೊಳಿಸಬೇಕಾಗಿದ್ದ ಕೆಲ ದಿನಗಳ ಮುನ್ನಾ 1969ರ ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮ 8(4)ರ ಅಡಿಯಲ್ಲಿ 2025ರ ಮೇ 9ರಂದು ಅಧಿಸೂಚನೆ ಹೊರಡಿಸಲಾಗಿದೆ.

ಡಿಜಿ ಮತ್ತು ಐಜಿಪಿ ಹುದ್ದೆಗೆ ಪರಿಗಣಿಸಲು ಕೇಂದ್ರ ಲೋಕಸೇವಾ ಆಯೋಗಕ್ಕೆ ರವಾನಿಸಲು ಏಪ್ರಿಲ್ 23, 2025 ರಂದು ನನ್ನ ವಿವರಗಳನ್ನು ತೆಗೆದುಕೊಂಡ ನಂತರ ಈ ನೋಟಿಸ್ ನೀಡಲಾಗಿದೆ ಎಂದು ಅಲೋಕ್ ಕುಮಾರ್ ಆರೋಪಿಸಿದ್ದಾರೆ.

ಇದೇ ಆರೋಪದ ಮೇಲೆ ಹಿಂದೆ ಇಲಾಖಾ ವಿಚಾರಣೆಯನ್ನು ಆರಂಭಿಸಲಾಗಿತ್ತು. ಆದರೆ ಯಾವುದೇ ಅಂತಿಮ ಕೈಗೊಂಡಿರಲಿಲ್ಲ. ಮೇ 21ರಿಂದ ಅನ್ವಯವಾಗುವಂತೆ ಅವರಿಗೆ ಮುಂಬಡ್ತಿ ನೀಡಬೇಕಾಗಿತ್ತು. ಇದಕ್ಕೆ ತಡೆ ಉಂಟು ಮಾಡುವ ದುರುದ್ದೇಶದಿಂದ ನೋಟಿಸ್ ನೀಡಲಾಗಿದೆ ಎಂದು ಕುಮಾರ್ ಪರ ವಕೀಲರು ಸಿಎಟಿ ಮುಂದೆ ವಾದಿಸಿದರು.

ವಿಭಾಗೀಯ ಪೀಠ ಈ ವಿಚಾರವನ್ನು ಆಲಿಸಬೇಕು ಎಂದು ಪರಿಗಣಿಸಿದ ಸಿಎಟಿ ನ್ಯಾಯಾಂಗ ಸದಸ್ಯ ಬಿ.ಕೆ.ಶ್ರೀವಾಸ್ತವ ಅವರು, ಮುಂದಿನ ವಿಚಾರಣೆಯ ದಿನಾಂಕವಾದ ಜೂನ್ 10 ರವರೆಗೆ ಅಧಿಸೂಚನೆಯನ್ನು ತಡೆಹಿಡಿಯಲಾಗಿದೆ ಎಂದು ಆದೇಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT