ಶಿರಾಡಿ ಘಾಟ್ ರಸ್ತೆ  
ರಾಜ್ಯ

ಶಿರಾಡಿ ಘಾಟ್ ನ ಎರಡು ಕಡೆ ಭೂಕುಸಿತ: ವಾಹನ ಸಂಚಾರಕ್ಕೆ ಅಡ್ಡಿ

ಬೆಂಗಳೂರು ಟು ಮಂಗಳೂರು ರಸ್ತೆಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಹಾಸನ: ರಾಜ್ಯದಲ್ಲಿ ಈ ತಿಂಗಳು ಪೂರ್ವ ಮುಂಗಾರು ಮಳೆ ಧಾರಾಕಾರವಾಗಿ ಸುರಿದಿದೆ. ನೈರುತ್ಯ ಮಾನ್ಸೂನ್ ಮಾರುತಗಳು ರಾಜ್ಯವನ್ನು ಪ್ರವೇಶಿಸಿವೆ. ನಿರಂತರ ಬಿರುಗಾಳಿ ಮಳೆಯಿಂದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ (Shiradi Ghat Road) ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು ಟು ಮಂಗಳೂರು ರಸ್ತೆಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ತಡೆಗೋಡೆ ನಿರ್ಮಿಸಿದ್ದರೂ ಕೂಡ ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ.

ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್​ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT