ಬಂಧಿತ ಆರೋಪಿಗಳು 
ರಾಜ್ಯ

Hanagal gang-rape: ಜಾಮೀನು ಸಿಕ್ಕಿದ್ದಕ್ಕೆ ರೋಡ್ ಶೋ ನಡೆಸಿದ್ದ ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ, ನಾವು ಅವರ ಜಾಮೀನು ರದ್ದತಿ ಕೋರಿ ಅರ್ಜಿ ಸಲ್ಲಿಸುತ್ತೇವೆ" ಎಂದು ಅಂಶು ಕುಮಾರ್ ಶ್ರೀವಾಸ್ತವ ಅವರು ಹೇಳಿದ್ದಾರೆ.

ಹಾವೇರಿ: ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಕಾರುಗಳಲ್ಲಿ ರೋಡ್ ಶೋ ನಡೆಸಿ, ವಿಜಯೋತ್ಸವ ಆಚರಿಸಿದ್ದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಏಳು ಆರೋಪಿಗಳಿಗೆ ಕೋರ್ಟ್ ಶನಿವಾರ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.

ಜೈಲಿನಿಂದ ಗುರುವಾರ ರಾತ್ರಿ ಬಿಡುಗಡೆಯಾಗಿದ್ದ ಎಲ್ಲಾ ಏಳು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದ ಹಾನಗಲ್ ಠಾಣೆ ಪೊಲೀಸರು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗಳನ್ನು ಜೂನ್ 2 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶು ಕುಮಾರ್ ಶ್ರೀವಾಸ್ತವ ಅವರು ಭಾನುವಾರ ತಿಳಿಸಿದ್ದಾರೆ.

"ನಾವು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದೇವೆ. ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ, ನಾವು ಅವರ ಜಾಮೀನು ರದ್ದತಿ ಕೋರಿ ಅರ್ಜಿ ಸಲ್ಲಿಸುತ್ತೇವೆ" ಎಂದು ಅಂಶು ಕುಮಾರ್ ಶ್ರೀವಾಸ್ತವ ಅವರು ಹೇಳಿದ್ದಾರೆ.

ಹಾವೇರಿ ಸಬ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಾದ ಅಫ್ತಾದ್‌ಚಂದನ ಕಟ್ಟಿ, ಮದರ್‌ಸಾಬ್ ಮಂಡಕ್ಕಿ, ಸಮಿವುಲ್ಲ ಲಾಲನವರ್, ಮೊಹ್ಮದ್ ಸಾದಿಕ್ ಅಗಸಿನಿ, ಶೋಯಿಬ್‌ ಮುಲ್ಲ, ತೌಸಿಫ್‌ಚೋಟಿ ಮತ್ತು ರಿಯಾಜ್‌ಸೆವಿಕೇರಿ ಇವರುಗಳು ಕಾರುಗಳಲ್ಲಿ, ಬೈಕ್‌ಗಳಲ್ಲಿ ಕುಳಿತು ವಿಜಯೋತ್ಸವದ ರೀತಿಯಲ್ಲಿ ಮೆರವಣಿಗೆ ನಡೆಸಿರುವ ವೀಡಿಯೊಗಳು ವೈರಲ್ ಆಗಿದ್ದವು.

ಆರೋಪಿಗಳ ಈ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ವಿಜಯೋತ್ಸವ ನಡೆಸಿದ್ದ ಆರೋಪಿಗಳಿಗೆ ಶಾಕ್ ನೀಡಿದ್ದು, ಎಲ್ಲ 7 ಆರೋಪಿಗಳನ್ನು ಬಂಧಿಸಿ ಮತ್ತದೇ ಹಾವೇರಿ ಜೈಲಿಗೆ ಅಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT