ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ 
ರಾಜ್ಯ

Mandya: ವಾಹನ ತಪಾಸಣೆ ವೇಳೆ Traffic Police ಎಡವಟ್ಟು; 3 ವರ್ಷದ ಬಾಲಕಿ ಸಾವು, ರಸ್ತೆಯಲ್ಲೇ ಶವವಿಟ್ಟು ಪೋಷಕರ ಪ್ರತಿಭಟನೆ; ಮೂವರು ಎಎಸ್ಐ ಸಸ್ಪೆಂಡ್!

ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ.

ಮಂಡ್ಯ: ಟ್ರಾಫಿಕ್ ಪೊಲೀಸರ (Mandya Traffic Police) ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸೋಮವಾರ ನಡೆದಿದೆ.

ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ. ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಸವಾರ ಹೆಲ್ಮೆಟ್ ಧರಿಸಿಲ್ಲ ಎಂದು ಪೊಲೀಸರು ತಪಾಸಣೆಗಾಗಿ ತಡೆದಿದ್ದು, ಈ ವೇಳೆ ಪೋಷಕರು ಮಗುವಿಗೆ ನಾಯಿ ಕಚ್ಚಿದ್ದು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದಾಗ ಪೊಲೀಸರು ಬಿಟ್ಟಿದ್ದಾರೆ.

ಆದರೆ ಬೈಕ್ ಸವಾರ ಕೊಂಚ ಮುಂದಕ್ಕೆ ಹೋಗುತ್ತಲೇ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಮತ್ತೊಂದು ವಾಹನ ಅವರಿಗೆ ಟಚ್ ಆಗಿದೆ. ಈ ವೇಳೆ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಮಗು ಕೂಡ ಕೆಳಗೆ ರಸ್ತೆ ಮೇಲೆ ಬಿದ್ದಿದೆ. ಇದೇ ಸಂದರ್ಭದಲ್ಲೇ ಹಿಂಬದಿಯಿಂದ ಬಂದ ಟೆಂಪೋ ಮಗು ಮೇಲೆ ಹರಿದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಮಗುವಿನ ಸಾವಿಗೆ ಪೊಲೀಸರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಗುವಿನ ಮೃತದೇಹವನ್ನು ರಸ್ತೆ ಮಧ್ಯೆ ಇಟ್ಟು ಪೊಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

ಮೂವರು ಅಧಿಕಾರಿಗಳ ಅಮಾನತು

ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳನ್ನು ಅಮಾನತು ಮಾಡಲಾಗಿದೆ. ಮಗು ಸಾವಿಗೆ ಮಂಡ್ಯ (Mandya) ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್​ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್​ಐಗಳನ್ನು ಅಮಾನತು ಮಾಡಿದ್ದಾರೆ.

ಈ ಬಗ್ಗೆ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಟಿವಿ9ಗೆ ಮಾಹಿತಿ ನೀಡಿದ್ದಾರೆ. ASIಗಳಾದ ಜಯರಾಮ್​, ನಾಗರಾಜ್​, ಗುರುದೇವ್ ಅಮಾನತುಗೊಂಡವರಾಗಿದ್ದಾರೆ.

ಏನಿದು ಘಟನೆ?

ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ಧರಿಸಿಲ್ಲ ಎಂದು ತಪಾಸಣೆಗಾಗಿ ಬೈಕ್‌ ಅನ್ನು ಅಡ್ಡಗಟ್ಟಿದ್ದಾರೆ.

ಈ ವೇಳೆ ಪೋಷಕರು ಮಗುವಿಗೆ ನಾಯಿ ಕಚ್ಚಿದ್ದು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದಾಗ ಪೊಲೀಸರು ಬಿಟ್ಟಿದ್ದಾರೆ.

ಆದರೆ ಬೈಕ್ ಸವಾರ ಕೊಂಚ ಮುಂದಕ್ಕೆ ಹೋಗುತ್ತಲೇ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಮತ್ತೊಂದು ವಾಹನ ಅವರಿಗೆ ಟಚ್ ಆಗಿದೆ. ಈ ವೇಳೆ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಮಗು ಕೂಡ ಕೆಳಗೆ ರಸ್ತೆ ಮೇಲೆ ಬಿದ್ದಿದೆ. ಇದೇ ಸಂದರ್ಭದಲ್ಲೇ ಹಿಂಬದಿಯಿಂದ ಬಂದ ಟೆಂಪೋ ಮಗು ಮೇಲೆ ಹರಿದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT