ರವಿಕುಮಾರ್ 
ರಾಜ್ಯ

ಕಲಬುರಗಿ ಜಿಲ್ಲಾಧಿಕಾರಿಗೆ ನಿಂದನೆ: ಬಿಜೆಪಿ MLC ರವಿಕುಮಾರ್ ವಿರುದ್ಧ FIR

ಕಲಬುರಗಿ ಕರ್ನಾಟಕದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನಿಸಿದ್ದರು. ಇದಕ್ಕೆಲ್ಲ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣ ಎಂದು ದತ್ತಾತ್ರೇಯ ದೂರಿನಲ್ಲಿ ತಿಳಿಸಿದ್ದಾರೆ.

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ದತ್ತಾತ್ರೇಯ ಇಕ್ಕಳಕಿ ಅವರು ನೀಡಿದ ದೂರಿನ ಅನ್ವಯ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ–ಎಸ್‌ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಈಚೆಗೆ ಬಿಜೆಪಿಯ ಪ್ರತಿಭಟನೆ ನಡೆಯಿತು. ರವಿಕುಮಾರ್ ಅವರು ತಮ್ಮ ಭಾಷಣದಲ್ಲಿ ‘ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಎಂಬುದು ಖಚಿತವಾಗಿಲ್ಲ. ಶಹಾಬಾದ್ ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐಗಳಾದ ಚಂದ್ರಶೇಖರ ತಿಗಡಿ ಮತ್ತು ನಟರಾಜ ಲಾಡೆ ಅವರು ಕರ್ತವ್ಯ ನಿರ್ವಹಿಸಲು ಅಸಮರ್ಥರಾಗಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಕಲಬುರಗಿ ಕರ್ನಾಟಕದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನಿಸಿದ್ದರು. ಇದಕ್ಕೆಲ್ಲ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣ ಎಂದು ದತ್ತಾತ್ರೇಯ ದೂರಿನಲ್ಲಿ ತಿಳಿಸಿದ್ದಾರೆ.

ರವಿಕುಮಾರ್ ಮುಸ್ಲಿಮರ ವಿರುದ್ಧ ದ್ವೇಷವನ್ನು ಹುಟ್ಟು ಹಾಕಿ, ಪೊಲೀಸ್ ಅಧಿಕಾರಿಗಳನ್ನು ಗುಲಾಮರು ಎಂದು ಅವಹೇಳನಕಾರಿ ಪದ ಬಳಸಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕು ಎಂದಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳ ವಿರುದ್ಧವೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ಜಿಲ್ಲಾಧಿಕಾರಿ ವಿರುದ್ಧದ ಅಜಾಗರೂಕ ಹೇಳಿಕೆಗಳಿಗೆ ರವಿಕುಮಾರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆನಾನು ಅಧಿಕಾರಿಗಳನ್ನು ಗೌರವಿಸುತ್ತಾರೆ ಮತ್ತು ಅವರ ವೃತ್ತಿಪರ ಸಮಗ್ರತೆಯ ಬಗ್ಗೆ ಯಾವುದೇ ದೂರುಗಳಿಲ್ಲ ಎಂದು ರವಿ ಕುಮಾರ್ ಸ್ಪಷ್ಟನೆ ನೀಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: ಸೋಲು ಬೆನ್ನಲ್ಲೇ ಟ್ರೋಫಿಯೊಂದಿಗೆ ಮೈದಾನ ತೊರೆದ ಪಾಕ್ ಸಚಿವ; ICCಗೆ ದೂರು ನೀಡಲು BCCI ಮುಂದು..!

Asia Cup 2025: ಪಾಕ್ ಸಚಿವನಿಂದ ಟ್ರೋಫ್ ಸ್ವೀಕರಿಸಲು ಭಾರತ ನಕಾರ; ತಡರಾತ್ರಿ ದುಬೈನಲ್ಲಿ ಹೈಡ್ರಾಮಾ, ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ..!

ಏಷ್ಯಾ ಕಪ್ 2025 ಫೈನಲ್: ಸೋಲಿನ ಹತಾಶೆ, ರನ್ನರ್-ಅಪ್ ಚೆಕ್ ಬಿಸಾಡಿ ಹೋದ ಪಾಕ್ ನಾಯಕ; ವಿಡಿಯೋ

Asia Cup 2025: champion ತಂಡಕ್ಕೆ ಟ್ರೋಫಿ ಕೊಡದಿದ್ದನ್ನು ಎಂದೂ ನೋಡಿಲ್ಲ, ನನ್ನ ತಂಡವೇ ನನಗೆ ಟ್ರೋಫಿ; ಸೂರ್ಯಕುಮಾರ್ ಯಾದವ್

ಆಟದ ಮೈದಾನದಲ್ಲೂ 'operation sindoor': ಪಾಕ್ ಕಾಲೆಳೆದ ಪ್ರಧಾನಿ ಮೋದಿ, ಭಾರತ ತಂಡಕ್ಕೆ ಅಭಿನಂದನೆ

SCROLL FOR NEXT