ಕಾಮಗಾರಿ ಪರಿಶೀಲಿಸುತ್ತಿರುವ ಡಿ.ಕೆ ಶಿವಕುಮಾರ್ 
ರಾಜ್ಯ

ಮೆಟ್ರೋ ಕಾಮಗಾರಿ ಇರುವೆಡೆ ಸುಗಮ ಸಂಚಾರಕ್ಕೆ ಮುಖ್ಯರಸ್ತೆ ಮತ್ತು ಸರ್ವೀಸ್ ರಸ್ತೆ ವಿಲೀನ: ಡಿಸಿಎಂ

ಈಗಾಗಲೇ ಬೆಂಗಳೂರಿನ ಶಾಸಕರ ಜತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸುಮಾರು 40-50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು: ಮೆಟ್ರೋ ಕಾಮಗಾರಿ ನಡೆಯುತ್ತಿರುವ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನ ಮಾಡುವ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಮೆಟ್ರೋ ಮಾರ್ಗದಲ್ಲಿ ಬರುವ ಮಹದೇವಪುರ ಹಾಗೂ ಮಾರತಹಳ್ಳಿ ಮೇಲ್ಸೇತುವೆ ಬಳಿ ವೀಕ್ಷಣೆ ಮಾಡಿದರು. ಇತ್ತೀಚೆಗೆ ನಡೆದ ಗ್ರೇಟರ್ ಬೆಂಗಳೂರು ಸಭೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳ ನಡುವೆ ಇರುವ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಲು ತೀರ್ಮಾನ ಮಾಡಲಾಗಿತ್ತು.

ಈ ವಿಚಾರವಾಗಿ ಈಗಾಗಲೇ ಬೆಂಗಳೂರಿನ ಶಾಸಕರ ಜತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸುಮಾರು 40-50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ.

ಮೆಟ್ರೋ ರೈಲು ಯೋಜನೆ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯ ಬಹುತೇಕ ಭಾಗ ಕಾಮಗಾರಿ ಉದ್ದೇಶಕ್ಕೆ ಬಳಕೆಯಾಗುತ್ತಿದ್ದು ವಾಹನಗಳು ಸುಗಮವಾಗಿ ಸಾಗಲು ಸಾಧ್ಯವಾಗದೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ