ಸಿಎಂ ಸಿದ್ದರಾಮಯ್ಯ 
ರಾಜ್ಯ

ನಟ ಕಮಲ್ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿವೆ.

ಬೆಂಗಳೂರು: ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್' ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದು, ಇದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ನಗರದಲ್ಲಿ ಕಮಲ್ ಹಾಸನ್ ಹೇಳಿಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, "ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ.... ಅವರಿಗೆ(ಕಮಲ್ ಹಾಸನ್) ಗೊತ್ತಿಲ್ಲ" ಎಂದು ತಿರುಗೇಟು ನೀಡಿದರು.

ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿವೆ.

ನಟ-ರಾಜಕಾರಣಿ ಕಮಲ್ ಹಾಸನ್ ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಲ್ಲದೆ ಕ್ಷಮೆಯಾಚಿಸಲು ವಿಫಲವಾದರೆ, ಅವರ 'ಥಗ್ ಲೈಫ್' ಚಿತ್ರ ಪ್ರದರ್ಶನವನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

T20 ವಿಶ್ವಕಪ್ 2026: 4 ಓವರ್ ನಲ್ಲಿ 53 ರನ್.. ಸೈಲೆಂಟ್ ಮಾಡಲು ಬಂದು ತಮ್ಮ ತಂಡವೇ ಸೈಲೆಂಟ್ ಆಗುವಂತೆ ಮಾಡಿದ Sam Curran

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

SCROLL FOR NEXT