ಸಂಗ್ರಹ ಚಿತ್ರ 
ರಾಜ್ಯ

ಒಳಮೀಸಲಾತಿ ಜಾತಿ ಗಣತಿ: ಪಾಲಿಕೆ ವ್ಯಾಪ್ತಿಯಲ್ಲಿ ಸಮೀಕ್ಷಾ ಕಾರ್ಯ ಕುಂಠಿತ, ಕ್ರಮಕ್ಕೆ BBMP ಮುಂದು

ಮೇ ತಿಂಗಳಿನಿಂದ ಸಮೀಕ್ಷೆ ಪ್ರಾರಂಭವಾಗಿದ್ದು, ಅಂದಿನಿಂದ 8,215 ಗಣತಿದಾರರು 1,31,730 ಎಸ್‌ಸಿ ಮನೆಗಳಿಗೆ ಭೇಟಿ ನೀಡಿದ್ದಾರೆ.

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯದಲ್ಲಿ ಒಳಮೀಸಲಾತಿ ನೀಡುವ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿ ಹೊರತುಪಡಿಸಿ ರಾಜ್ಯದಾದ್ಯಂತ ಉತ್ತಮವಾಗಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.

ಈ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಅಧಿಕಾರಿಗಳೊಂದಿಗೆ ಮಂಗಳವಾರ ಪರಿಶೀಲನಾ ಸಭೆ ನಡೆಸಿದರು.

ಮೇ ತಿಂಗಳಿನಿಂದ ಸಮೀಕ್ಷೆ ಪ್ರಾರಂಭವಾಗಿದ್ದು, ಅಂದಿನಿಂದ 8,215 ಗಣತಿದಾರರು 1,31,730 ಎಸ್‌ಸಿ ಮನೆಗಳಿಗೆ ಭೇಟಿ ನೀಡಿದ್ದಾರೆ. ಪರಿಶಿಷ್ಟ ಜಾತಿಗಳು ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರದೇಶಗಳಲ್ಲಿ, ವಿಶೇಷವಾಗಿ ಪೂರ್ವ ವಲಯದಲ್ಲಿ ಹೆಚ್ಚುವರಿ ಗಣತಿದಾರರನ್ನು ನಿಯೋಜಿಸಿ, ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳು ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರದೇಶಗಳಲ್ಲಿ ಪ್ರಮುಖವಾಗಿ ಪೂರ್ವ ವಲಯದಲ್ಲಿ ಸಮುದಾಯದ ಮುಖಂಡರು ಮತ್ತು ಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿರಲು ಗಣತಿದಾರರಿಗೆ ತಿಳಿಸಲಾಗಿದೆ. ಜೊತೆಗೆ ಸಮೀಕ್ಷೆ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷೆಯೂ ಆಗಿರುವ ಉಮಾ ಮಹಾದೇವನ್ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಗಳ ನಾಯಕರು ಮತ್ತು ಪದಾಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ನಗರದಲ್ಲಿ ಸಮೀಕ್ಷಾ ಕಾರ್ಯ ತಡವಾಗಿದೆ. ಮನೆ-ಮನೆ, ಶಿಬಿರ ಹಾಗೂ ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಹೀಗೆ ಮೂರು ಹಂತಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ನಗರದಲ್ಲಿ ಸಮೀಕ್ಷಾ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಾಗೃತಿ ಸಹ ನಡೆಸಲಾಗುತ್ತಿದ್ದು, ಯಶಸ್ವಿಯಾಗಲು ಸಮುದಾಯದ ಮುಖಂಡರ ಸಹಕಾರ ಅಗತ್ಯವಾಗಿದೆ. ಸಮೀಕ್ಷಾ ಕಾರ್ಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!