ಶೌಚಾಲಯ ಶುಲ್ಕದ ವಿರುದ್ಧ ಪ್ರತಿಭಟನೆ (Photo | Express)
ರಾಜ್ಯ

ಬೆಂಗಳೂರು ಮೆಟ್ರೋ ಯೂಟರ್ನ್: ಶೌಚಾಲಯ ಬಳಕೆಗೂ ಶುಲ್ಕ ನಿರ್ಧಾರ ವಾಪಸ್

ನಗರದ 12 ಮೆಟ್ರೋ ನಿಲ್ದಾಣಗಳಲ್ಲಿರುವ ಶೌಚಾಲಯಗಳ ಬಳಕೆಗೆ ಶುಲ್ಕ ವಿಧಿಸಿತ್ತು. ಇದಕ್ಕಾಗಿ ಲಾಭ ರಹಿತ ಸಂಘಟನೆಯಾದ ಸುಲಭ್‌ ಇಂಟರ್‌ನ್ಯಾಶನಲ್ ಜತೆ ಒಪ್ಪಂದ ಮಾಡಿಕೊಂಡಿತ್ತು.

ಬೆಂಗಳೂರು: ಪ್ರಯಾಣಿಕರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್) ಮೆಟ್ರೋ ನಿಲ್ದಾಣಗಳಲ್ಲಿರುವ ಸಾರ್ವಜನಿಕ ಶೌಚಾಲಯಗಳ ಬಳಕೆಗೆ ವಿಧಿಸಿದ್ದ ಶುಲ್ಕವವನ್ನು ರದ್ದುಗೊಳಿಸಿದೆ.

ಮೆಟ್ರೋ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಬಳಸುವುದಕ್ಕೆ ಶುಲ್ಕವನ್ನು ಸಂಗ್ರಹಿಸಲಾಗುವುದಿಲ್ಲ. ಈ ಶೌಚಾಲಯಗಳು ಸಾರ್ವಜನಿಕ ಬಳಕೆಗೆ ಉಚಿತವಾಗಿ ಮುಕ್ತವಾಗಿರಲಿವೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರದ 12 ಮೆಟ್ರೋ ನಿಲ್ದಾಣಗಳಲ್ಲಿರುವ ಶೌಚಾಲಯಗಳ ಬಳಕೆಗೆ ಶುಲ್ಕ ವಿಧಿಸಿತ್ತು. ಇದಕ್ಕಾಗಿ ಲಾಭ ರಹಿತ ಸಂಘಟನೆಯಾದ ಸುಲಭ್‌ ಇಂಟರ್‌ನ್ಯಾಶನಲ್ ಜತೆ ಒಪ್ಪಂದ ಮಾಡಿಕೊಂಡಿತ್ತು.

ಇದಕ್ಕೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ತನ್ನ ನಿರ್ಧಾರದಿಂದ ಹಿಂದೆ ಸರಿದಿರುವ ಬಿಎಂಆರ್ ಸಿಎಲ್ ಸುಲಭ್‌ ಇಂಟರ್‌ನ್ಯಾಶನಲ್ ಜೊತೆಗಿನ ಒಪ್ಪಂದವನ್ನು ರದ್ದುಪಡಿಸಿದೆ.

ಕರ್ನಾಟಕದ ಸುಲಭ್ ಇಂಟರ್ನ್ಯಾಷನಲ್'ನ ನಿಯಂತ್ರಕ ಎಂ. ವಿಶ್ವನಾಥ್ ಅವರು ಮಾತನಾಡಿ, ಬಿಎಂಆರ್ಸಿಎಲ್ ಶೌಚಾಲಯಗಳ ಬಳಕೆಯ ಶುಲ್ಕವನ್ನು ಸಂಗ್ರಹಿಸುವುದಿಲ್ಲ ಎಂದು ಘೋಷಿಸಿದ್ದು, ಹೀಗಾಗಿ ನಾವು 12 ಮೆಟ್ರೋ ನಿಲ್ದಾಣಗಳಿಂದ ನಮ್ಮ ಕಾರ್ಮಿಕರನ್ನು ಹಿಂತೆಗೆದುಕೊಂಡಿದ್ದೇವೆಂದು ಹೇಳಿದರು.

ಬಿಎಂಆರ್ ಸಿಎಲ್ ನಡೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ವಕೀಲ ಟಿ. ನರಸಿಂಹ ಮೂರ್ತಿ ಅವರು ಮಾತನಾಡಿ, ಬಿಎಂಆರ್ಸಿಎಲ್ ಅಧಿಕಾರಿಗಳ ಈ ನಿರ್ಧಾರ ಸಂತಸ ತಂದಿದೆ. ಭವಿಷ್ಯದಲ್ಲಿ ಇಂತಹ ನಿರ್ಧಾರ ತೆಗೆದುಕೊಳ್ಳುವುದ್ಕಕೂ ಮುನ್ನ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಬೇಕೆಂದು ಹೇಳಿದ್ದಾರೆ.

ಶೌಚಾಲಯಗಳು ಮತ್ತು ಕುಡಿಯುವ ನೀರು ಪ್ರೀಮಿಯಂ ಸೇವೆಗಳಲ್ಲ, ಮೂಲಭೂತ ಅವಶ್ಯಕತೆಗಳಾಗಿವೆ. ಈಗಾಗಲೇ ನಮ್ಮ ಮೆಟ್ರೋ ಟಿಕೆಟ್ ದರಗಳನ್ನು ಶೇ.71ರಷ್ಟು ಹೆಚ್ಚಳ ಮಾಡಿದ್ದು, ಇದರ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸುವುದು ಹೆಚ್ಚುವರಿ ಹೊರೆಯಾಗುತ್ತಿತ್ತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT