ಡಿಕೆ.ಶಿವಕುಮಾರ್  
ರಾಜ್ಯ

HAL ನಮ್ಮ ಹೆಮ್ಮೆ, ಸ್ಥಳಾಂತರಿಸಲು ಬಿಡಲ್ಲ: ಡಿ.ಕೆ ಶಿವಕುಮಾರ್

ಆಂಧ್ರ ಪ್ರದೇಶದಲ್ಲಿ ಹೊಸದನ್ನು ಸ್ಥಾಪಿಸಲು ಅವರು ಸ್ವತಂತ್ರರು, ನಾವು ಅದನ್ನು ಆಕ್ಷೇಪಿಸುವುದಿಲ್ಲ. ಆದರೆ, ನಮ್ಮ ರಾಜ್ಯದ ಆಸ್ತಿಗಳನ್ನು ರಕ್ಷಿಸಲು ನಮ್ಮ ಸರ್ಕಾರ ಏನು ಬೇಕಾದರೂ ಮಾಡುತ್ತದೆ.

ಬೆಂಗಳೂರು: ಹೆಚ್‌ಎಎಲ್‌ ನಮ್ಮ ಹೆಮ್ಮೆ, ಯಾವುದೇ ಕಾರಣಕ್ಕೂ ಸ್ಥಳಾಂತರಿಸಲು ಅವಕಾಶ ನೀಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸರ್ಕಾರವಾಗಿ ನಾವು ಯಾವುದನ್ನೂ ಸ್ಥಳಾಂತರಿಸಲು ಬಿಡುವುದಿಲ್ಲ. ಅವರು ವಿಸ್ತರಿಸಲು ಬಯಸಿದರೆ ನಾವು ಭೂಮಿ ನೀಡುತ್ತೇವೆ. ಆಂಧ್ರಪ್ರದೇಶದಲ್ಲಿ ಹೊಸದನ್ನು ಸ್ಥಾಪಿಸಲು ಅವರು ಸ್ವತಂತ್ರರು, ನಾವು ಅದನ್ನು ಆಕ್ಷೇಪಿಸುವುದಿಲ್ಲ. ಆದರೆ, ನಮ್ಮ ರಾಜ್ಯದ ಆಸ್ತಿಗಳನ್ನು ರಕ್ಷಿಸಲು ನಮ್ಮ ಸರ್ಕಾರ ಏನು ಬೇಕಾದರೂ ಮಾಡುತ್ತದೆ. ಕರ್ನಾಟಕದ ಮಟ್ಟಿಗೆ ಎಚ್‌ಎಎಲ್‌ ನಮ್ಮ ಹೆಮ್ಮೆ ಎಂದು ಹೇಳಿದರು.

ಹೆಚ್ಎಎಲ್ ಅನ್ನು ಯಾವುದೇ ಬಿಜೆಪಿ ಸರ್ಕಾರ ನೀಡಿಲ್ಲ. ಮೊದಲಿನಿಂದಲೂ ನಮ್ಮಲಿರುವ ತಾಂತ್ರಿಕ, ಮಾನವ ಸಂಪನ್ಮೂಲ ನೋಡಿ ಜವಾಹರ್‌ ಲಾಲ್‌ ನೆಹರೂ ಅವರು ಇದನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಏರ್ ಬೇಸ್, ಏರ್ ಶೋಗಳನ್ನು ನೀಡಿದ್ದಾರೆ. ಬೆಂಗಳೂರು, ಬೀದರ್‌ಗಳಲ್ಲಿ ವಾಯುನೆಲೆ ಸ್ಥಾಪಿಸಲಾಗಿದೆ. ಚಂದ್ರಬಾಬು ನಾಯ್ಡು ಅವರು ರಾಜಕೀಯವಾಗಿ ಮಾಡಿರುವ ಮನವಿ ಬಗ್ಗೆ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನಮ್ಮಲ್ಲೂ ಹೆಚ್ಎಎಲ್‌ಗೆ ಅಗತ್ಯವಾದ ಭೂಮಿಯನ್ನು ನೀಡಲಾಗಿದೆ.

ತುಮಕೂರಿನಲ್ಲಿ ಹೆಲಿಕಾಪ್ಟರ್ ವಿಭಾಗಕ್ಕೆ ಜಮೀನು ನೀಡಲಾಗಿದೆ. ಅವರು ಹೊಸದಾಗಿ ಏನಾದರೂ ಮಾಡಿಕೊಳ್ಳಲಿ. ನೆರೆ ರಾಜ್ಯಗಳಲ್ಲಿ ಏನು ಆಗಬಾರದು ಎಂಬ ಮನಸ್ಥಿತಿ ನಮ್ಮದಲ್ಲ. ನಮ್ಮ ರಾಜ್ಯದಲ್ಲಿನ ಆಸ್ತಿಯನ್ನು ನಮ್ಮ ಸರ್ಕಾರ ಕಾಪಾಡಲಿದೆ. ನಮ್ಮ ಆಸ್ತಿ, ನಮ್ಮ ನವರತ್ನಗಳು ಅವು. ಇವುಗಳನ್ನು ಉಳಿಸಿಕೊಳ್ಳುತ್ತೇವೆಂದು ತಿಳಿಸಿದರು.

ಇದೇ ವೇಳೆ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ ಅವರು, "ಕೇಂದ್ರ ಸಚಿವರು ಮಾತನಾಡುತ್ತಿಲ್ಲ. ಇಂದು ಸಂಜೆಯೊಳಗೆ ಎಲ್ಲರೂ ಮಾತನಾಡಬೇಕು ಎಂದು ಆಗ್ರಹಿಸಿದರು.

ವಿವಾದ ಸಂಬಂಧ ಈ ಹಿಂದೆ ಹೇಳಿಕೆ ನೀಡಿದ್ದ ಎಂಬಿ.ಪಾಟೀಲ್ ಅವರು, ಆಂಧ್ರಪ್ರದೇಶ ಸರ್ಕಾರ ಹೊಸ ಘಟಕ ಕೇಳುವುದರಲ್ಲಿ ಅರ್ಥ ಇದೆ. ಆದರೆ, ಈಗಾಗಲೇ ಕರ್ನಾಟಕದಲ್ಲಿ ಇರುವಂಥದ್ದನ್ನು ವರ್ಗಾಯಿಸುವಂತೆ ಕೇಳುವುದು ತಪ್ಪು. ಮಾಧ್ಯಮ ವರದಿಗಳು ನಿಜವೇ ಆದಲ್ಲಿ ಇದು ಬಹಳ ಗಂಭೀರ ಸಂಗತಿಯಾಗುತ್ತದೆ. ಹೆ​​ಎಎಲ್​​ನ ಯಾವುದೇ ಪ್ರಾಜೆಕ್ಟ್ ಅನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರ ಮಾಡುವ ಯಾವುದೇ ಪ್ರಸ್ತಾಪಕ್ಕೆ ಆಕ್ಷೇಪ ವ್ಯಕ್ತಪಡಿಸುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ನಮ್ಮ ತಟ್ಟೆಯಲ್ಲಿರುವ ಅನ್ನ ಕಿತ್ತುಕೊಳ್ಳಬೇಡಿ: ಕುರುಬ ಸಮುದಾಯ ST ಸೇರ್ಪಡೆ ಪ್ರಸ್ತಾಪಕ್ಕೆ VS ಉಗ್ರಪ್ಪ ವಿರೋಧ

SCROLL FOR NEXT