ಪ್ರಾತಿನಿಧಿಕ ಚಿತ್ರ 
ರಾಜ್ಯ

ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ: ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ- ಬಿಜೆಪಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು.

ಮಂಗಳೂರು: ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಾಯಕ ಶರಣ್ ಪಂಪ್‌ವೆಲ್ ಬಂಧನಕ್ಕೆ ಕರ್ನಾಟಕ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಹಿಂದೂ ಕಾರ್ಯಕರ್ತರನ್ನು ಬಂಧಿಸುವ ಪ್ರವೃತ್ತಿ ಮುಂದುವರಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ಶರಣ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿದ ನಂತರ ಬಿಡುಗಡೆ ಮಾಡಿದ್ದಾರೆ.

'ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ನಂತರ ಬಂದ್‌ಗೆ ಕರೆ ನೀಡಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ಅವರನ್ನು ಬಂಧಿಸಲು ಮಂಗಳೂರು ಪೊಲೀಸರು ತೆಗೆದುಕೊಂಡ ಕ್ರಮ ಅತ್ಯಂತ ಖಂಡನೀಯ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳಿಗೆ ಸೂಕ್ತ ರಕ್ಷಣೆ ಸಿಗುತ್ತಿಲ್ಲ. ಬದಲಾಗಿ, ಈ ಸರ್ಕಾರ ಪೊಲೀಸರ ಮೂಲಕ ಹಿಂದೂ ಕಾರ್ಯಕರ್ತರನ್ನು ಬೆದರಿಸಿ ಕಿರುಕುಳ ನೀಡುತ್ತಿದೆ. ಕ್ಷುಲ್ಲಕ ಕಾರಣಗಳಿಗೆ ಅವರನ್ನು ಬಂಧಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸುವುದು ಅವರನ್ನು ಮೌನಗೊಳಿಸುವ ಪ್ರಯತ್ನದಂತೆ ತೋರುತ್ತದೆ. ಕಾಂಗ್ರೆಸ್ ಸರ್ಕಾರವು ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಪದೇ ಪದೆ ದೇಶ ವಿರೋಧಿ ಮತ್ತು ಜಿಹಾದಿ ಶಕ್ತಿಗಳಿಗೆ ಆಶ್ರಯ ನೀಡುವ ಈ ಸರ್ಕಾರವು ಈಗ ಹಿಂದೂ ಕಾರ್ಯಕರ್ತರು ಮತ್ತು ನಾಯಕರನ್ನು ಗುರಿಯಾಗಿಸಿಕೊಂಡಿದೆ. ಕರ್ನಾಟಕ ಬಿಜೆಪಿ ಇದನ್ನು ಸಹಿಸುವುದಿಲ್ಲ' ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರಕ್ಕೆ ನಾನು ಎಚ್ಚರಿಕೆ ನೀಡುತ್ತೇನೆ. ಇಂತಹ ಬಂಧನಗಳು ಮುಂದುವರಿದರೆ, ಅದರ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಹೇಳಿದರು.

ಸುಹಾಸ್ ಶೆಟ್ಟಿ ಹತ್ಯೆಯ ನಂತರ ದ್ವೇಷ ಭಾಷಣ ಮಾಡಿದ್ದಕ್ಕಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ಸದಸ್ಯರು ಮತ್ತು ಮುಖಂಡರು ನಡೆಸಿದ ಪ್ರತಿಭಟನೆಯ ನಂತರ ಕದ್ರಿ ಪೊಲೀಸರು ಶರಣ್ ಪಂಪ್‌ವೆಲ್ ಅವರನ್ನು ಬಂಧಿಸಿದರು.

20 ದಿನಗಳ ಹಿಂದೆ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಬಂದ್‌ಗೆ ಕರೆ ನೀಡಿದ್ದಕ್ಕಾಗಿ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ, ಈಗ ಅವರನ್ನು ಬಂಧಿಸಿರುವುದನ್ನು ಹಿಂದೂ ಕಾರ್ಯಕರ್ತರು ಪ್ರಶ್ನಿಸಿದರು ಮತ್ತು ಮುಸ್ಲಿಂ ಸಮುದಾಯವನ್ನು ಸಮಾಧಾನಪಡಿಸಲು ಬಂಧಿಸಲಾಗಿದೆ ಎಂದು ಆರೋಪಿಸಿದರು.

ಪಂಪ್‌ವೆಲ್ ಬಂಧನದ ನಂತರ, ನೂರಾರು ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ