ಬಂಧನ online desk
ರಾಜ್ಯ

NCP ನಾಯಕನ ಸೊಸೆ ಕೊಲೆ ಪ್ರಕರಣ: ಪ್ರೀತಂ ಪಾಟೀಲ್ ಬಂಧನ

ಕೊಲೆ ಮಾಡಿ ವೈಷ್ಣವಿ ಮಾವ ,ಎನ್ ಸಿ ಪಿ ಪಕ್ಷದ ನಾಯಕ ರಾಜೇಂದ್ರ ಹಗವಣೆ ಮತ್ತು ಮೈದುನ ಸುಶೀಲ ತಲೆ ಮರೆಸಿಕೊಂಡಿದ್ದರು.

ಬೆಳಗಾವಿ: ಮಹಾರಾಷ್ಟ್ರದ ಎನ್‌ಸಿಪಿ ನಾಯಕ ರಾಜೇಂದ್ರ ಹಗವಣೆ ಅವರ ಸೊಸೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯದ ಮಾಜಿ ಸಚಿವ ವೀರಕುಮಾರ ಪಾಟೀಲ ಅವರ ಪುತ್ರ ಪ್ರೀತಂ ಪಾಟೀಲ ಅವರನ್ನು ಮಹಾರಾಷ್ಟ್ರದ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ನಿವಾಸಿಯಾದ ಪ್ರೀತಂ ಪಾಟೀಲ ಅವರನ್ನು ಬಂಧಿಸಿ, ಮಹಾರಾಷ್ಟ್ರದ ಪುಣೆ ಜೈಲಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ವೈಷ್ಣವಿ ಶಶಾಂಕ ಹಗವಣೆ(23) ಕೊಲೆಯಾದ ಯುವತಿ. ಣೆ ಜಿಲ್ಲೆಯಲ್ಲಿ ಮೇ.16 ರಂದು ಅನುಮಾನಾಸ್ಪದವಾಗಿ ಸಾವಿಗಿಡಾಗಿದ್ದರು. ಈ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು. ಆದರೆ, ಶವ ಪರೀಕ್ಷೆಯ ನಂತರ ತನಿಖೆಯಿಂದ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ ಎಂಬುದು ಬೆಳಕಿಗೆ ಬಂದಿತ್ತು‌.

ಕೊಲೆ ಮಾಡಿ ವೈಷ್ಣವಿ ಮಾವ ,ಎನ್ ಸಿ ಪಿ ಪಕ್ಷದ ನಾಯಕ ರಾಜೇಂದ್ರ ಹಗವಣೆ ಮತ್ತು ಮೈದುನ ಸುಶೀಲ ತಲೆ ಮರೆಸಿಕೊಂಡಿದ್ದರು.

ಆರೋಪಿತರಿಗೆ ಆಶ್ರಯ ಹಾಗುೂ ಆರ್ಥಿಕ ಸಹಾಯ ನೀಡಿದ ಆರೋಪದಡಿ ಪ್ರೀತಂ ಪಾಟೀಲ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಎನ್‌ಸಿಪಿ ನಾಯಕ ರಾಜೇಂದ್ರ ಹಗವಾನೆ ಅವರ ಸೊಸೆಯನ್ನು ಒಳಗೊಂಡ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವೀರಕುಮಾರ್ ಪಾಟೀಲ್ ಅವರ ಪುತ್ರ ಪ್ರೀತಂ ಪಾಟೀಲ್ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಪುಣೆ ಪೊಲೀಸರ ತಂಡವು ಬೆಳಗಾವಿ ಜಿಲ್ಲೆಯ ನಿಪಾನಿ ತಾಲ್ಲೂಕಿನ ಕುಗ್ನೋಲಿಯಲ್ಲಿರುವ ಪ್ರೀತಂ ಅವರನ್ನು ಅವರ ಮನೆಯಿಂದ ಬಂಧಿಸಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT