ಕೇಂದ್ರ ಸಚಿವ ವಿ. ಸೋಮಣ್ಣ 
ರಾಜ್ಯ

ಜನೌಷಧಿ ಕೇಂದ್ರ ಮುಚ್ಚಬೇಡಿ: ಸಿಎಂ ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಸೋಮಣ್ಣ ಮನವಿ

ಸಿದ್ದರಾಮಯ್ಯ ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದಾರೆ. ಆದರೆ, ಅವರು ಬಡವರು ಹಾಗೂ ತಳವರ್ಗದ ಜನರ ಹಿತ ಕಾಯುತ್ತಿಲ್ಲ. ಸರ್ಕಾರದ ನಿರ್ಧಾರವನ್ನು ಕೂಡಲೇ ಮರುಪರಿಶೀಲನೆ ಮಾಡಬೇಕು.

ಬೆಂಗಳೂರು: ಕರ್ನಾಟಕದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಬಾರದು ಎಂದು ಒತ್ತಾಯಿಸಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಈ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಔಷಧಿಗಳು ಹಾಗೂ ಸರ್ಜಿಕಲ್‌ ಐಟಂಗಳು ರೋಗಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ದೊರಕುತ್ತಿತ್ತು. ಖಾಸಗಿಯವರ ಒತ್ತಡಕ್ಕೆ ಮಣಿದು ಈ ಕೇಂದ್ರಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಅವರು ದೂರಿದ್ದಾರೆ.

ಸಿದ್ದರಾಮಯ್ಯ ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದಾರೆ. ಆದರೆ, ಅವರು ಬಡವರು ಹಾಗೂ ತಳವರ್ಗದ ಜನರ ಹಿತ ಕಾಯುತ್ತಿಲ್ಲ. ಸರ್ಕಾರದ ನಿರ್ಧಾರವನ್ನು ಕೂಡಲೇ ಮರುಪರಿಶೀಲನೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದು "ಬಡವರ ವಿರೋಧಿ" ಕ್ರಮವಾಗಿದ್ದು, ಇದು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ನೋವುಂಟು ಮಾಡುತ್ತದೆ ಎಂದಿದ್ದಾರೆ.

ಜನೌಷಧಿ ಕೇಂದ್ರಗಳಿಗೆ ಹೊಸ ಅರ್ಜಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸುವುದಲ್ಲದೆ, ಅಸ್ತಿತ್ವದಲ್ಲಿರುವ ಕೇಂದ್ರಗಳಿಗೆ ಪರವಾನಗಿಗಳನ್ನು ನವೀಕರಿಸಲು ನಿರಾಕರಿಸುವ ರಾಜ್ಯದ ನಿರ್ಧಾರದಿಂದ ನಾನು ತೀವ್ರವಾಗಿ ನಿರಾಶೆಗೊಂಡಿದ್ದೇನೆ ಎಂದಿದ್ದಾರೆ. ಜನೌಷಧಿ ಯೋಜನೆಯು 15 ವರ್ಷಗಳಿಗೂ ಹೆಚ್ಚು ಕಾಲ ಚಾಲನೆಯಲ್ಲಿದೆ. ಈ ಕೇಂದ್ರಗಳನ್ನು ಮುಚ್ಚುವುದರಿಂದ ಬಡವರಿಗೆ ಜೇಬಿಗೆ ಹೊರೆಯಾಗುತ್ತದೆ.

ಯಾವ ರೀತಿಯ ಸಲಹೆ ಅಥವಾ ಪರಿಸ್ಥಿತಿ ಅಂತಹ ಕ್ರಮಕ್ಕೆ ಕಾರಣವಾಯಿತು ಎಂದು ನನಗೆ ಅರ್ಥವಾಗುತ್ತಿಲ್ಲ" ಎಂದು ಅವರು ಹೇಳಿದರು, ಸಾರ್ವಜನಿಕರ ಹಿತದೃಷ್ಟಿಯಿಂದ ಆದೇಶವನ್ನು ಮರುಪರಿಶೀಲಿಸಿ ಹಿಂಪಡೆಯುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ 180 ಜನೌಷಧಿ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ ಮತ್ತು ಸರ್ಕಾರಿ ಆಸ್ಪತ್ರೆಗಳ ಹೊರಗೆ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳು ಕಾರ್ಯನಿರ್ವಹಿಸುತ್ತಲೇ ಇರುತ್ತವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದರು.

ಎಲ್ಲಾ ಆಸ್ಪತ್ರೆಗಳು ಉಚಿತವಾಗಿ ಔಷಧಿಗಳನ್ನು ಒದಗಿಸಬೇಕು ಮತ್ತು ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಎಲ್ಲಾ ಕೇಂದ್ರಗಳನ್ನು ಹಂತಹಂತವಾಗಿ ರದ್ದುಗೊಳಿಸುವ ಕ್ರಮವು ಅದನ್ನೇ ಖಚಿತಪಡಿಸುತ್ತದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT