ಸಂಗ್ರಹ ಚಿತ್ರ 
ರಾಜ್ಯ

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಮೋಹಿತ್ ಮಹಾತೊ ಬಂಧಿಸಿದ NIA

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಆರೋಪಿಯಿಂದ ಮೊಬೈಲ್‌ ಸೇರಿ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ ಎಂದು ಎನ್‌ಐಎ ತಿಳಿಸಿದೆ.

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ 2024ರ ಆಗಸ್ಟ್‌ 28ರಂದು ನಡೆದಿದ್ದ ಗುಂಪು ಘರ್ಷಣೆ ವೇಳೆ, ಅಲ್ಲಿನ ಬಿಜೆ‍ಪಿ ಮುಖಂಡ ಪ್ರಿಯಾಂಗು ಪಾಂಡೆ ಅವರ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮೋಹಿತ್‌ ಮಹಾತೋ ಅಲಿಯಾಸ್ ಸಾಹಿಲ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು, ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಆರೋಪಿಯಿಂದ ಮೊಬೈಲ್‌ ಸೇರಿ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ ಎಂದು ಎನ್‌ಐಎ ತಿಳಿಸಿದೆ. ಮಾಜಿ ಸಂಸದ ಅರ್ಜುನ್‌ ಸಿಂಗ್ ಅವರ ನಿವಾಸಕ್ಕೆ ಪ್ರಿಯಾಂಗು ಪಾಂಡೆ ಮತ್ತು ಅವರ ಬೆಂಬಲಿಗರು ತೆರಳುತ್ತಿದ್ದ ವೇಳೆ ಗುಂಪೊಂದು ದಾಳಿ ನಡೆಸಿ ಹಲ್ಲೆ ಮಾಡಿತ್ತು. ಈ ಪ್ರಕರಣದಲ್ಲಿ ಇದುವರೆಗೂ 17 ಆರೋಪಿಗಳನ್ನು ಬಂಧಿಸಲಾಗಿದೆ.

ಆರಂಭದಲ್ಲಿ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳದ ಸ್ಥಳೀಯ ಪೊಲೀಸರೇ ನಡೆಸಿ 12 ಮಂದಿಯನ್ನು ಬಂಧಿಸಿದ್ದರು. ನಂತರ ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಲಾಗಿತ್ತು. ಎನ್‌ಐಎ ಅಧಿಕಾರಿಗಳು ಐವರನ್ನು ಬಂಧಿಸಿದ್ದರು.

ಕಳೆದ ನವೆಂಬರ್‌ನಲ್ಲಿ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾವಣೆ ಮಾಡಲಾಗಿತ್ತು. ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ನಿವಾಸಿಯಾದ ಸಾಹಿಲ್‌ನ ಪಿತೂರಿ ಇರುವುದು ತನಿಖೆಯಿಂದ ಗೊತ್ತಾಗಿತ್ತು. ಆತನನ್ನು ಬುಧವಾರ ಬೆಳಿಗ್ಗೆ ಬೆಂಗಳೂರಿನ ಸ್ಥಳವೊಂದರಲ್ಲಿ ವಶಕ್ಕೆ ಪಡೆದು ಬಂಧಿಸಲಾಯಿತು. ಪ್ರಕರಣದಲ್ಲಿ ಇದುವರೆಗೂ 14 ಆರೋಪಿಗಳ ವಿರುದ್ಧ ಎನ್‌ಐಎ ನ್ಯಾಯಾಲಯಕ್ಕೆ ಮೂರು ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ಎನ್‌ಐಎ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

SCROLL FOR NEXT