ಸಚಿವ ಶಿವರಾಜ್ ತಂಗಡಗಿ  
ರಾಜ್ಯ

ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನು ನಿಷೇಧಿಸಿ: ಫಿಲ್ಮ್ ಚೇಂಬರ್‌ಗೆ ಸಚಿವ ಶಿವರಾಜ್ ತಂಗಡಗಿ ಪತ್ರ

ಕಮಲ್ ಹಾಸನ್ ಅವರು ಓರ್ವ ಹಿರಿಯ ನಟರಾಗಿ ಕನ್ನಡ ಭಾಷೆಯ ಹಲವು ಚಿತ್ರಗಳಲ್ಲಿ ನಟಿಸಿ ಕನ್ನಡ ಭಾಷೆಯ ಬಗೆ, ತಿಳಿದವರಾಗಿದ್ದು, ಈ ರೀತಿ ಮಾತನಾಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ.

ಬೆಂಗಳೂರು: ನಟ ಕಮಲ್ ಹಾಸನ್ ಅವರು ಕನ್ನಡಿಗರ ಕ್ಷಮೆಯಾಚಿಸದಿದ್ದಲ್ಲಿ ಅವರು ನಟಿಸುವ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿಷೇಧ ಹೇರಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್‌ ತಂಗಡಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.

ತಮಿಳು ಚಿತ್ರರಂಗದ ನಟ ಕಮಲ್ ಹಾಸನ್ ಅವರು ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಕನ್ನಡ ಭಾಷೆಯ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಕನ್ನಡ ಭಾಷೆಯ ಕುರಿತಾಗಿ ಮಾತನಾಡಿರುವುದು ಕನ್ನಡಿಗರಿಗೆ ಹಾಗೂ ನನಗೆ ತೀವ್ರ ನೋವಾಗಿದೆ. ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆಯುಂಟಾಗಿದೆ.

ಕಮಲ್ ಹಾಸನ್ ಅವರು ಓರ್ವ ಹಿರಿಯ ನಟರಾಗಿ ಕನ್ನಡ ಭಾಷೆಯ ಹಲವು ಚಿತ್ರಗಳಲ್ಲಿ ನಟಿಸಿ ಕನ್ನಡ ಭಾಷೆಯ ಬಗೆ, ತಿಳಿದವರಾಗಿದ್ದು, ಈ ರೀತಿ ಮಾತನಾಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ. ಕನ್ನಡದ ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ಯಾರೇ, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅವರಿಂದ ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಆದ್ದರಿಂದ ಕಮಲ್ ಹಾಸನ್ ಅವರು ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು.

ಕಮಲ್ ಹಾಸನ್ ಅವರು ರಾಜ್ಯದ ಜನರು/ ಕನ್ನಡಿಗರ ಕ್ಷಮೆಯಾಚಿಸದಿದ್ದಲ್ಲಿ ಅವರು ನಟಿಸಿರುವ ಚಲನ ಚಿತ್ರಗಳಿಗೆ ಕರ್ನಾಟಕದಲ್ಲಿ ಕೂಡಲೇ ನಿರ್ಬಂಧ ವಿಧಿಸಬೇಕೆಂದು ಈ ಮೂಲಕ ತಿಳಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT