ಬಸವರಾಜ ಬೊಮ್ಮಾಯಿ 
ರಾಜ್ಯ

ಶಿಗ್ಗಾಂವಿಯಲ್ಲಿ ಜೂಜಾಟದಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಪೊಲೀಸರಿಂದಲೇ ಬೆಂಬಲ: ಸಂಸದ ಬಸವರಾಜ ಬೊಮ್ಮಾಯಿ ಬೇಸರ

ಹಲವಾರು ಬಾರಿ ಜೂಜಾಟದಲ್ಲಿ ಕೆಲವರು ಸಿಕ್ಕರೂ ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದೂವರೆಗೆ ಎರಡು ಪ್ರಕರಣಗಳು ಜೂಜುಕೋರರ ಮೇಲೆ ದಾಖಲಾಗಿದ್ದು ಯಾರೋಬ್ಬರನ್ನು ಬಂಧಿಸದೇ ನಕಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಹಾವೇರಿ: ಕಳೆದ 6-7 ತಿಂಗಳಿನಿಂದ ಶಿಗ್ಗಾವಿ ತಾಲೂಕಿನಲ್ಲಿ ಜೂಜಾಟ, ಒಸಿ ಹಾಗೂ ಡ್ರಗ್ಸ್ ಸೇವನೆ ಹೆಚ್ಚಾಗಿರುವ ಸುದ್ದಿ ಬರುತ್ತಿವೆ. ಒಂದು ಸುಸಂಸ್ಕೃತ ಕ್ಷೇತ್ರವನ್ನು ಜೂಜುಗಾರರ ಕ್ಷೇತ್ರವಾಗಿ ಪರಿವರ್ತನೆ ಆಗುತ್ತಿರುವುದು ನನಗೆ ದುಖ ತಂದಿದೆ. ಎಲ್ಲ ಚಟುವಟಿಕೆಗಳಿಗೆ ಪೊಲೀಸರು ಸಾಥ್ ಕೊಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಹಾವೇರಿ ಎಸ್ಪಿ ಅವರಿಗೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಲವಾರು ಬಾರಿ ಜೂಜಾಟದಲ್ಲಿ ಕೆಲವರು ಸಿಕ್ಕರೂ ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದೂವರೆಗೆ ಎರಡು ಪ್ರಕರಣಗಳು ಜೂಜುಕೋರರ ಮೇಲೆ ದಾಖಲಾಗಿದ್ದು ಯಾರೋಬ್ಬರನ್ನು ಬಂಧಿಸದೇ ನಕಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇತ್ತೀಚಿಗೆ ಶಿಗ್ಗಾವಿ ಡಿವೈಎಸ್‌ಪಿ 4 ಜನ ಗಾಂಜಾ ಮಾರುವವರನ್ನು ಕರೆತಂದು ಪ್ರಕರಣ ದಾಖಲಿಸದೆ ಸುಮ್ಮನೆ ಬಿಟ್ಟು ಕಳುಹಿಸಿದ್ದಾರೆ ಎಂಬ ಮಾಹಿತಿ ಇದೆ.

ಅಲ್ಲದೆ, ಸ್ಥಳೀಯ ಶಾಸಕರ ಆಪ್ತರು ಮತ್ತು ಆಶ್ರಯ ಸಮಿತಿ ಸದಸ್ಯರು ಈ ಜೂಜಾಟ ಆಡಿಸುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಮಾಧ್ಯಮದಲ್ಲಿ ಸೆರೆ ಹಿಡಿದಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರನ್ನು ತಕ್ಷಣವೇ ಬಂಧಿಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯ ಸಿಸಿಬಿ ಪೊಲಿಸರು ಬಿಸ್ನಳ್ಳಿ ಬಳಿ 50ಕೆಜಿ ಗಾಂಜಾ ಸಿಕ್ಕಿದ್ದನ್ನು ಕೇವಲ 10ಕೆಜಿ ಎಂದು ತೋರಿಸಿದ್ದಾರೆ ಎಂದು ಕೇಸ್‌ಗಳ ಮುಖಾಂತರ ಗೊತ್ತಾಗುತ್ತಿದೆ. ಕೂಡಲೇ ತಾಲೂಕಿನಲ್ಲಿ ಒಸಿ, ಜೂಜಾಟ, ಗಾಂಜಾ ಸೇವನೆ ನಿಲ್ಲಿಸಬೇಕು ಅವರು ಎಷ್ಟೇ ದೊಡ್ಡವರಿದ್ದರೂ ರಾಜಕೀಯ ಒತ್ತಡಕ್ಕೆ ಮಣಿಯದೆ ಎಲ್ಲರನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಕೊಗಳ್ಳಬೇಕು. ಅಲ್ಲದೇ ಈ ಅಕ್ರಮದಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT