ಲೋಕೇಶ್ವರ ಸ್ವಾಮೀಜಿಗೆ ಸೇರಿದ ಮಠ ಧ್ವಂಸ 
ರಾಜ್ಯ

ಬೆಳಗಾವಿ: ಲೋಕೇಶ್ವರ ಸ್ವಾಮೀಜಿ ವಿರುದ್ಧ ಅಪಹರಣ- ಅತ್ಯಾಚಾರ ಕೇಸ್; ರಾಮ ಮಂದಿರ ಮಠ ಧ್ವಂಸ

ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ ಗೈರಾಣ (ಗೋಮಾಳ) ಜಾಗವನ್ನ ಅತಿಕ್ರಮಣ ಮಾಡಿಕೊಂಡು 8 ವರ್ಷಗಳ ಹಿಂದೆ ಲೋಕೇಶ್ವರ ಸ್ವಾಮೀಜಿ ಅಕ್ರಮವಾಗಿ ಮಠ ನಿರ್ಮಿಸಿಕೊಂಡಿದ್ದರ ಕುರಿತು ದೂರು ಕೇಳಿ ಬಂದಿತ್ತು‌.

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಆರೋಪದ ಮೇಲೆ ಸ್ವಯಂ ಘೋಷಿತ ಮಠಾಧೀಶ ಲೋಕೇಶ್ವರ ಸ್ವಾಮಿ ಅವರನ್ನು ಬಂಧಿಸಿದ ನಂತರ, ರಾಯ್‌ಬಾಗ್ ತಾಲ್ಲೂಕು ಆಡಳಿತದ ಅಧಿಕಾರಿಗಳು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಮಠಾಧೀಶರ ಅಕ್ರಮ ಆಶ್ರಮವನ್ನು ಕೆಡವಿದ್ದಾರೆ.

ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ ಗೈರಾಣ (ಗೋಮಾಳ) ಜಾಗವನ್ನ ಅತಿಕ್ರಮಣ ಮಾಡಿಕೊಂಡು 8 ವರ್ಷಗಳ ಹಿಂದೆ ಲೋಕೇಶ್ವರ ಸ್ವಾಮೀಜಿ ಅಕ್ರಮವಾಗಿ ಮಠ ನಿರ್ಮಿಸಿಕೊಂಡಿದ್ದರ ಕುರಿತು ದೂರು ಕೇಳಿ ಬಂದಿತ್ತು‌.

ಇದರ ಕುರಿತು ಪರಿಶೀಲನೆ ನಡೆಸಿದ ರಾಯಬಾಗ ತಹಶಿಲ್ದಾರರ ಮಠ ತೆರವುಗೊಳಿಸುವಂತೆ ಕಳೆದ ವಾರ ನೋಟಿಸ್ ನೀಡಿದ್ದರು. ರಾಯಬಾಗ ತಹಶಿಲ್ದಾರರ ಸುರೇಶ ಮುಂಜೆ ಸಮ್ಮುಖದಲ್ಲಿ ಮೂರು ಜೆಸಿಬಿ ಬಳಸಿ ಮಠವನ್ನ ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಮಠಾಧೀಶರ ಇತ್ತೀಚಿನ ಬಂಧನ ಮತ್ತು ನ್ಯಾಯಾಂಗ ಬಂಧನದ ನಂತರ, ರಾಯ್‌ಬಾಗ್ ತಾಲ್ಲೂಕು ಆಡಳಿತದ ಅಧಿಕಾರಿಗಳು ಬೆಳಗಿನ ಜಾವದ ಮೊದಲು ಧ್ವಂಸ ಕಾರ್ಯಾಚರಣೆಯನ್ನು ನಡೆಸಿದರು. ಮೂರು ಬುಲ್ಡೋಜರ್‌ಗಳನ್ನು ಬಳಸಿ ಮಠವನ್ನು ಕೆಡವಲಾಯಿತು. ಈ ಕಾರ್ಯಾಚರಣೆಯಲ್ಲಿ ಮಠಕ್ಕೆ ಸಂಬಂಧಿಸಿದ ದೇವಾಲಯದ ಸಂಪೂರ್ಣ ಧ್ವಂಸ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT