ಪ್ರಿಯಾಂಕ್ ಖರ್ಗೆ 
ರಾಜ್ಯ

ಅನಧಿಕೃತ ಬಡಾವಣೆ: ಗ್ರಾಮೀಣ ಪ್ರದೇಶಗಳ ನಿವೇಶನ ಮಾಲೀಕರಿಗೆ 'ಬಿ ಖಾತಾ' ನೀಡಲು ಸರ್ಕಾರ ಚಿಂತನೆ!

ಬಿ ಖಾತಾ ನೀಡುವ ಯೋಜನೆಯನ್ನು ಜುಲೈ ಮಧ್ಯದಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಈ ಉಪಕ್ರಮದಿಂದ 95 ಲಕ್ಷಕ್ಕೂ ಹೆಚ್ಚು ಜನರು ಪ್ರಯೋಜನ ಪಡೆಯುತ್ತಾರೆ.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅನಧಿಕೃತ ಲೇಔಟ್‌ಗಳಲ್ಲಿರುವ ಆಸ್ತಿಗಳ ಮಾಲೀಕರಿಗೆ ಒಂದು ಬಾರಿ ಪರಿಹಾರಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನನ್ನು ರೂಪಿಸಲಾಗುತ್ತಿದ್ದು, ಅಂತಹ ಆಸ್ತಿಗಳಿಗೆ ಬಿ ಖಾತಾ ನೀಡುವ ಯೋಜನೆ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ ಖಾತಾ ನೀಡುವ ಯೋಜನೆಯನ್ನು ಜುಲೈ ಮಧ್ಯದಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಈ ಉಪಕ್ರಮದಿಂದ 95 ಲಕ್ಷಕ್ಕೂ ಹೆಚ್ಚು ಜನರು ಪ್ರಯೋಜನ ಪಡೆಯುತ್ತಾರೆ. ಉಪಕ್ರಮದಿಂದ ಸರ್ಕಾರಕ್ಕೆ 000 ಕೋಟಿ ರೂ.ಗಳ ಆದಾಯದ ನಿರೀಕ್ಷೆಯಿದೆ ಎಂದು ಹೇಳಿದರು.

ನಮ್ಮ ಇಲಾಖೆಯು 5,770 ಗ್ರಾಮೀಣ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳಾಗಿ ಮೇಲ್ದರ್ಜೆಗೇರಿಸಿದ್ದು, ಅಲ್ಲಿ 50.62 ಲಕ್ಷ ಜನರು ಸದಸ್ಯರಾಗಿ ನೋಂದಾಯಿಸಿಕೊಂಡಿದ್ದಾರೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ 3,469 ಮಹಿಳೆಯರನ್ನು ಕಸ ಸಂಗ್ರಹಣಾ ವಾಹನಗಳ ಚಾಲಕರಾಗಿ ನೇಮಿಸಲಾಗಿದೆ.

ಮನ್ರೇಗಾ ಅಡಿಯಲ್ಲಿ ಕೆಲಸ ಮಾಡುವ ಯುವ ತಾಯಂದಿರ ಮಕ್ಕಳಿಗಾಗಿ ಇಲಾಖೆಯು 3,888 ಕೂಸಿನಾ ಮನೆ (ಕ್ರೆಚ್‌ಗಳು) ಅನ್ನು ಪ್ರಾರಂಭಿಸಿದೆ. ಒಟ್ಟಾರೆಯಾಗಿ, 53,711 ಮಕ್ಕಳನ್ನು ದಾಖಲಿಸಲಾಗಿದೆ. ಇದರರ್ಥ, 50,000 ಕ್ಕೂ ಹೆಚ್ಚು ಮಹಿಳೆಯರು ಸ್ವಾವಲಂಬಿಗಳಾಗಲು ಕೆಲಸ ಮಾಡಲು ಪ್ರಾರಂಭಿಸಿದ್ದಾರೆ. ದೈನಂದಿನ ವೇತನವನ್ನು 349 ರೂ.ಗಳಿಂದ 370 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಲಾಖೆಯು ರಾಜ್ಯಾದ್ಯಂತ 20 ಲಕ್ಷ ಆಸ್ತಿಗಳನ್ನು ಅಭಿವೃದ್ಧಿಪಡಿಸಿದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT