ಕಮಲ್ ಹಾಸನ್ 
ರಾಜ್ಯ

ಕನ್ನಡಿಗರ ಕ್ಷಮೆ ಕೇಳದಿದ್ದರೆ ನಿಮ್ಮನ್ನೇ ಬ್ಯಾನ್ ಮಾಡಬೇಕಾಗುತ್ತೆ: ಕಮಲ್ ಹಾಸನ್‌ಗೆ ಸಚಿವ ತಂಗಡಗಿ ಎಚ್ಚರಿಕೆ

ಕಮಲ್ ಹಾಸನ್ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಅವರ ಚಲನಚಿತ್ರಗಳನ್ನು ಕರ್ನಾಟಕದಲ್ಲಿ ನಿಷೇಧಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ಕನ್ನಡಿಗರು ಕೆರಳುವಂತೆ ಮಾಡಿದೆ. ವಿಷಯ ಉಲ್ಬಣಗೊಳ್ಳುತ್ತಿದ್ದಂತೆ, ಕಮಲ್ ಹಾಸನ್ ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕೆಂಬ ಬೇಡಿಕೆ ಬಂದಿದೆ. ಆದರೆ ಅವರು ಕ್ಷಮೆಯಾಚಿಸಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾನು ಏನಾದರೂ ತಪ್ಪು ಹೇಳಿದ್ದರೆ ಕ್ಷಮೆಯಾಚಿಸುವುದಾಗಿ ಹೇಳಿದರು.

ಕಮಲ್ ಹಾಸನ್ ಕ್ಷಮೆಯಾಚಿಸಲು ನಿರಾಕರಿಸಿದ ನಂತರ, ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಈ ವಿವಾದಾತ್ಮಕ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದರು. ಕಮಲ್ ಹಾಸನ್ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಅವರ ಚಲನಚಿತ್ರಗಳನ್ನು ಕರ್ನಾಟಕದಲ್ಲಿ ನಿಷೇಧಿಸಲಾಗುವುದು ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರ ಪ್ರಕಾರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಈ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಹಾಸನ್ ಕ್ಷಮೆಯಾಚಿಸುವವರೆಗೆ ಅವರ ಚಲನಚಿತ್ರಗಳನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದು ಎಂಬ ನಿರ್ಧಾರಕ್ಕೆ ಚಲನಚಿತ್ರ ವಿತರಕರು ಮತ್ತು ಚಿತ್ರಮಂದಿರ ಮಾಲೀಕರು ಸಹ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು. 'ಕನ್ನಡ ಭಾಷೆ, ಕನ್ನಡಿಗರು ಮತ್ತು ಕರ್ನಾಟಕದ ಗೌರವದ ವಿರುದ್ಧ ಯಾವುದೇ ಹೇಳಿಕೆಯನ್ನು ಸಹಿಸಲಾಗುವುದಿಲ್ಲ' ಎಂದು ಸಚಿವರು ಸ್ಪಷ್ಟವಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT