ಕೋವಿಡ್ ಮಹಾಮಾರಿ 
ರಾಜ್ಯ

Covid-19: ರಾಜ್ಯದಲ್ಲಿ ಇಂದು ಕೊರೋನಾಗೆ ಮತ್ತೊಬ್ಬರು ಬಲಿ; 58 ಮಂದಿಗೆ ಪಾಸಿಟಿವ್, 53 ಮಂದಿ ಡಿಸ್ಚಾರ್ಜ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 58 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣ ಪತ್ತೆ ಮುಂದುವರೆದಿದ್ದು ಇಂದು ಮತ್ತೆ 58 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 58 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಅಂತೆಯೇ ಇದೇ ಅವಧಿಯಲ್ಲಿ ಸೋಂಕಿಗೆ ತುತ್ತಾಗಿದ್ದ 53 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ರಾಜ್ಯದಲ್ಲಿನ ಸಕ್ರಿಯ ಸೋಂಕಿತರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ.

ಈ ಪೈಕಿ 225 ಮಂದಿ ಹೋಮ್ ಐಸೋಲಷನ್ (ಮನೆಯಲ್ಲೇ ಚಿಕಿತ್ಸೆ) ನಲ್ಲಿದ್ದಾರೆ. 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಬ್ಬರು ಕೃತಕ ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 420 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 354 RTPCR ಪರೀಕ್ಷೆ ಮಾಡಲಾಗಿದೆ. 66 RAT ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಬಳ್ಳಾರಿ ಆಳಲು ಹೊರಟ ಪಾಳೇಗಾರರ ಮಧ್ಯೆ ವಿಜೃಂಭಿಸಿದ ಗನ್ ಸಂಸ್ಕೃತಿ (ನೇರ ನೋಟ)

VB-G RAM G ಕಾಯ್ದೆ: ಕೇಂದ್ರದ ವಿರುದ್ಧ ಕಾನೂನು ಸಮರಕ್ಕೆ ರಾಜ್ಯ ಸರ್ಕಾರ ಮುಂದು..!

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

SCROLL FOR NEXT