ಪತ್ರಿಕಾಗೋಷ್ಠಿ ದೃಶ್ಯ 
ರಾಜ್ಯ

ಏಯ್ ಇವನನ್ನ ಆಚೆ ಕಳ್ಸಿ: ಸುದ್ದಿಗೋಷ್ಠಿ ವೇಳೆ ಮುಸ್ಲಿಂ ಮುಖಂಡನ ವಿರುದ್ಧ ಗುಂಡೂರಾವ್ ಗರಂ

ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು.

ಮಂಗಳೂರು: ಮಂಗಳೂರಿನಲ್ಲಿ ಪ್ರತೀಕಾರದ ಕೊಲೆಗಳ ಸರಣಿ ಮುಂದೂವರೆದಿದೆ. ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಗುಂಡೂರಾವ್ ಮೊದಲಿಗೆ ಸುಮ್ಮನಿರುವಂತೆ ಗದುರಿದರು. ಇದಕ್ಕೆ ಸುಮ್ಮನಾಗದ ಆತ ಮಾತಾಡುವುದು ಮುಂದುವರಿಸಿದಾಗ ತಾಳ್ಮೆ ಕಳೆದುಕೊಳ್ಳುವ ದಿನೇಶ್ ಗುಂಡೂರಾವ್ ಆತನನ್ನು ಅಲ್ಲಿಂದ ಹೊರಗೆ ಹಾಕುವಂತೆ ಹೇಳುತ್ತಾರೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಯಿತು. ಈ ಘಟನೆಯಿಂದ ಕೆರಳಿದ ಮುಸ್ಲಿಂ ಮುಖಂಡರು ಕಾಂಗ್ರೆಸ್ ಗೆ ಸಾಮೂಹಿಕ ರಾಜಿನಾಮೆ ನೀಡಿದ್ದರು. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್ ಪೂಜಾರಿ ಅವರ ಪುತ್ರ ದೀಪಕ್(21), ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್(21) ಮತ್ತು ಸುರೇಶ್ ಬೆಲ್ಚಡ ಅವರ ಪುತ್ರ ಚಿಂತನ್(19) ಎಂಬುವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT