ಪತ್ರಿಕಾಗೋಷ್ಠಿ ದೃಶ್ಯ 
ರಾಜ್ಯ

ಏಯ್ ಇವನನ್ನ ಆಚೆ ಕಳ್ಸಿ: ಸುದ್ದಿಗೋಷ್ಠಿ ವೇಳೆ ಮುಸ್ಲಿಂ ಮುಖಂಡನ ವಿರುದ್ಧ ಗುಂಡೂರಾವ್ ಗರಂ

ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು.

ಮಂಗಳೂರು: ಮಂಗಳೂರಿನಲ್ಲಿ ಪ್ರತೀಕಾರದ ಕೊಲೆಗಳ ಸರಣಿ ಮುಂದೂವರೆದಿದೆ. ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಗುಂಡೂರಾವ್ ಮೊದಲಿಗೆ ಸುಮ್ಮನಿರುವಂತೆ ಗದುರಿದರು. ಇದಕ್ಕೆ ಸುಮ್ಮನಾಗದ ಆತ ಮಾತಾಡುವುದು ಮುಂದುವರಿಸಿದಾಗ ತಾಳ್ಮೆ ಕಳೆದುಕೊಳ್ಳುವ ದಿನೇಶ್ ಗುಂಡೂರಾವ್ ಆತನನ್ನು ಅಲ್ಲಿಂದ ಹೊರಗೆ ಹಾಕುವಂತೆ ಹೇಳುತ್ತಾರೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಯಿತು. ಈ ಘಟನೆಯಿಂದ ಕೆರಳಿದ ಮುಸ್ಲಿಂ ಮುಖಂಡರು ಕಾಂಗ್ರೆಸ್ ಗೆ ಸಾಮೂಹಿಕ ರಾಜಿನಾಮೆ ನೀಡಿದ್ದರು. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್ ಪೂಜಾರಿ ಅವರ ಪುತ್ರ ದೀಪಕ್(21), ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್(21) ಮತ್ತು ಸುರೇಶ್ ಬೆಲ್ಚಡ ಅವರ ಪುತ್ರ ಚಿಂತನ್(19) ಎಂಬುವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT