ದಿನೇಶ್ ಗುಂಡೂರಾವ್ 
ರಾಜ್ಯ

ಕರಾವಳಿಯಲ್ಲಿ ಮಳೆ ಅವಾಂತರ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಚಿವ ದಿನೇಶ್ ಗುಂಡೂರಾವ್

ಕಳೆದ ವಾರ ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಅನಾಹುತ ಸಂಭವಿಸಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ, ಮನೆಗಳು ಜಲಾವೃತವಾಗಿವೆ, ಮರಗಳು ಉರುಳಿವೆ ಮತ್ತು ಮೂಲಸೌಕರ್ಯಗಳಿಗೆ ಹಾನಿಯಾಗಿದೆ.

ಮಂಗಳೂರು: ಕಳೆದ ವಾರ ಕರಾವಳಿ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಘೋಷಿಸಿದ್ದಾರೆ.

ಮಳೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ನಿರಂತರ ಭಾರಿ ಮಳೆಯ ನಡುವೆ ಭೂಕುಸಿತ, ಮನೆ ಕುಸಿತ ಮತ್ತು ಇತರ ಅವಘಡಗಳಿಂದಾಗಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಕಳೆದ ವಾರ ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಅನಾಹುತ ಸಂಭವಿಸಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ, ಮನೆಗಳು ಜಲಾವೃತವಾಗಿವೆ, ಮರಗಳು ಉರುಳಿವೆ ಮತ್ತು ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಮನೆಗಳಿಗೆ ನೀರು ನುಗ್ಗಿದ ನಂತರ ಹಲವಾರು ಕುಟುಂಬಗಳನ್ನು ತಗ್ಗು ಪ್ರದೇಶಗಳಿಂದ ಸ್ಥಳಾಂತರಿಸಲಾಯಿತು.

ಜಿಲ್ಲೆಯಲ್ಲಿನ ಕೋಮು ಉದ್ವಿಗ್ನತೆಯ ವಿಷಯದ ಕುರಿತು ಮಾತನಾಡಿದ ರಾವ್, 'ನಾನು ಕರ್ನಾಟಕ ಸರ್ಕಾರದ ಪ್ರತಿನಿಧಿಯಾಗಿ ಇಲ್ಲಿದ್ದೇನೆ. ನಾವು ಸಮುದಾಯಗಳ ನಡುವೆ ತಾರತಮ್ಯ ಮಾಡುವುದಿಲ್ಲ. ದಕ್ಷಿಣ ಕನ್ನಡದಲ್ಲಿ ಕೋಮು ಸಮಸ್ಯೆಗಳು ಉಲ್ಬಣಗೊಳ್ಳುವುದನ್ನು ತಡೆಯುವುದು ನಮ್ಮ ಏಕೈಕ ಉದ್ದೇಶವಾಗಿದೆ' ಎಂದು ಹೇಳಿದರು.

ದ್ವೇಷ ಭಾಷಣಗಳ ಪರಿಣಾಮವಾಗಿ ಕೋಮು ಸೌಹಾರ್ದತೆ ಹದಗೆಡುತ್ತಿದೆ ಮತ್ತು ದ್ವೇಷ ಭಾಷಣ ಮಾಡುವವರನ್ನು ಬಂಧಿಸಬೇಕೆಂದು ಮುಸ್ಲಿಂ ನಾಯಕರೊಬ್ಬರು ಹೇಳಿದಾಗ ಮೊದಲಿಗೆ ಸುಮ್ಮನಿರುವಂತೆ ಸೂಚಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಅವಕಾಶ ನೀಡುವಂತೆ ಅವರಿಗೆ ಸೂಚಿಸಿದ್ದಾರೆ. ಆದರೆ, ಆ ವ್ಯಕ್ತಿ ಸಚಿವರೊಂದಿಗೆ ಜೋರಾಗಿ ವಾಗ್ವಾದ ನಡೆಸಿದಾಗ ಕೋಪಗೊಂಡ ಸಚಿವರು ಆತನನ್ನು ಸಭಾಂಗಣದಿಂದ ಹೊರಗೆ ಕರೆದೊಯ್ಯುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿದರು.

ಪರಿಸ್ಥಿತಿಯನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ಮತ್ತು ಶಾಂತಿ ಕಾಪಾಡಿಕೊಳ್ಳಲು ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಮಹಿಳೆಯರ ಬಗ್ಗೆ ಅಶ್ಲೀಲ ಸಾಹಿತ್ಯ: ಗನ್ ಪಾಯಿಂಟ್ ನಲ್ಲಿ ಕೊಲ್ತೀವಿ; ಸಿಂಗರ್ ಬಾದ್‌ಶಾಗೆ ಬೆದರಿಕೆ ಹಾಕಿದ ಬಿಷ್ಣೋಯ್ ಗ್ಯಾಂಗ್!

ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ; ಬಿಜೆಪಿ ಪಾಳಯಕ್ಕೆ TVK ವಿಜಯ್?: ಡಿಸಿಎಂ ಹುದ್ದೆ ಆಫರ್!

IPL 2026: ಇದಾದ ಬಳಿಕವೇ ಸಂಪೂರ್ಣ ವೇಳಾಪಟ್ಟಿ ಪ್ರಕಟ- BCCI

SCROLL FOR NEXT