ಡಂಬಲ್ (ಸಾಂದರ್ಭಿಕ ಚಿತ್ರ) 
ರಾಜ್ಯ

Bengaluru: ಲೈಟ್ ಆಫ್ ಮಾಡುವ ವಿಚಾರಕ್ಕೆ ಗಲಾಟೆ; ಡಂಬಲ್ ನಲ್ಲಿ ಸಹೋದ್ಯೋಗಿ ಹತ್ಯೆ; ಪೊಲೀಸರಿಗೆ ವ್ಯಕ್ತಿ ಶರಣು!

ನಗರದ ಗೋವಿಂದರಾಜ ನಗರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸೋಮಲ ವಂಶಿ (24) ಎಂಬಾತ ತನ್ನ ಸಹೋದ್ಯೋಗಿ ಭೀಮೇಶ್ ಬಾಬು (41) ಎಂಬುವವರನ್ನು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ.

ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿ ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಹತ್ಯೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಗೋವಿಂದರಾಜ ನಗರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸೋಮಲ ವಂಶಿ (24) ಎಂಬಾತ ತನ್ನ ಸಹೋದ್ಯೋಗಿ ಭೀಮೇಶ್ ಬಾಬು (41) ಎಂಬುವವರನ್ನು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ.

ಮೂಲಗಳ ಪ್ರಕಾರ ಗೋವಿಂದರಾಜ ನಗರ ಠಾಣೆ ವ್ಯಾಪ್ತಿಯಲ್ಲಿರುವ ಸಿನಿಮಾ ಚಿತ್ರೀಕರಣದ ವಿಡಿಯೋಗಳನ್ನು ದಿನದ ಆಧಾರದಲ್ಲಿ ಸಂಗ್ರಹಿಸಿಡುವ ಕಂಪನಿಯಲ್ಲಿ ವಿಜಯವಾಡ ಮೂಲದ ಸೋಮಲ ವಂಶಿ ಹಾಗೂ ಚಿತ್ರದುರ್ಗ ಮೂಲದ ಭೀಮೇಶ್ ಬಾಬು ಕೆಲಸ ಮಾಡಿಕೊಂಡಿದ್ದರು.

ಕಚೇರಿಯಲ್ಲಿ ರಾತ್ರಿ ತಂಗುತ್ತಿದ್ದ ಈ ಇಬ್ಬರ ನಡುವೆ ತಡರಾತ್ರಿ 1:30ರ ಸುಮಾರಿಗೆ ಲೈಟ್ ಆಫ್ ಮಾಡುವ ವಿಚಾರದಲ್ಲಿ ಪರಸ್ಪರ ಜಗಳ ಆರಂಭವಾಗಿದೆ. ಈ ಸಮಯದಲ್ಲಿ ಕೋಪಗೊಂಡ ಸೋಮಲ ವಂಶಿ ಕಚೇರಿಯಲ್ಲಿದ್ದ ಡಂಬೆಲ್‌ನಿಂದ ಭೀಮೇಶ್ ಬಾಬುವಿನ ಹಣೆಯ ಮೇಲೆ ಬಲವಾಗಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಭೀಮೇಶ್ ಬಾಬು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪೊಲೀಸರಿಗೆ ಆರೋಪಿ ಶರಣು

ಕೃತ್ಯದ ಬಳಿಕ ಆರೋಪಿ ಸೋಮಲ ವಂಶಿ ಸ್ವತಃ ತಾತೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಹಣೆಗೆ ಗನ್ ಇಟ್ಟು ತೇಜಸ್ವಿ ತನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದಾರೆ: ಪ್ರಧಾನಿ ಮೋದಿ

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ISRO! ಅತೀ ಭಾರವಾದ ರಾಕೆಟ್ ಮೂಲಕ CMS-03 ಉಪಗ್ರಹ ಯಶಸ್ವಿ ಉಡಾವಣೆ!

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ: ಜೆಡಿಎಸ್ ಕಿಡಿ, Video

3ನೇ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ದಾಖಲೆಯ ಜಯ, ತವರಿನಲ್ಲೇ ಕಾಂಗರೂಗಳಿಗೆ ಮುಖಭಂಗ

3ನೇ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಭರ್ಜರಿ ಜಯ

SCROLL FOR NEXT