ಡಂಬಲ್ (ಸಾಂದರ್ಭಿಕ ಚಿತ್ರ) 
ರಾಜ್ಯ

Bengaluru: ಲೈಟ್ ಆಫ್ ಮಾಡುವ ವಿಚಾರಕ್ಕೆ ಗಲಾಟೆ; ಡಂಬಲ್ ನಲ್ಲಿ ಸಹೋದ್ಯೋಗಿ ಹತ್ಯೆ; ಪೊಲೀಸರಿಗೆ ವ್ಯಕ್ತಿ ಶರಣು!

ನಗರದ ಗೋವಿಂದರಾಜ ನಗರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸೋಮಲ ವಂಶಿ (24) ಎಂಬಾತ ತನ್ನ ಸಹೋದ್ಯೋಗಿ ಭೀಮೇಶ್ ಬಾಬು (41) ಎಂಬುವವರನ್ನು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ.

ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿ ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಹತ್ಯೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಗೋವಿಂದರಾಜ ನಗರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸೋಮಲ ವಂಶಿ (24) ಎಂಬಾತ ತನ್ನ ಸಹೋದ್ಯೋಗಿ ಭೀಮೇಶ್ ಬಾಬು (41) ಎಂಬುವವರನ್ನು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ.

ಮೂಲಗಳ ಪ್ರಕಾರ ಗೋವಿಂದರಾಜ ನಗರ ಠಾಣೆ ವ್ಯಾಪ್ತಿಯಲ್ಲಿರುವ ಸಿನಿಮಾ ಚಿತ್ರೀಕರಣದ ವಿಡಿಯೋಗಳನ್ನು ದಿನದ ಆಧಾರದಲ್ಲಿ ಸಂಗ್ರಹಿಸಿಡುವ ಕಂಪನಿಯಲ್ಲಿ ವಿಜಯವಾಡ ಮೂಲದ ಸೋಮಲ ವಂಶಿ ಹಾಗೂ ಚಿತ್ರದುರ್ಗ ಮೂಲದ ಭೀಮೇಶ್ ಬಾಬು ಕೆಲಸ ಮಾಡಿಕೊಂಡಿದ್ದರು.

ಕಚೇರಿಯಲ್ಲಿ ರಾತ್ರಿ ತಂಗುತ್ತಿದ್ದ ಈ ಇಬ್ಬರ ನಡುವೆ ತಡರಾತ್ರಿ 1:30ರ ಸುಮಾರಿಗೆ ಲೈಟ್ ಆಫ್ ಮಾಡುವ ವಿಚಾರದಲ್ಲಿ ಪರಸ್ಪರ ಜಗಳ ಆರಂಭವಾಗಿದೆ. ಈ ಸಮಯದಲ್ಲಿ ಕೋಪಗೊಂಡ ಸೋಮಲ ವಂಶಿ ಕಚೇರಿಯಲ್ಲಿದ್ದ ಡಂಬೆಲ್‌ನಿಂದ ಭೀಮೇಶ್ ಬಾಬುವಿನ ಹಣೆಯ ಮೇಲೆ ಬಲವಾಗಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಭೀಮೇಶ್ ಬಾಬು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪೊಲೀಸರಿಗೆ ಆರೋಪಿ ಶರಣು

ಕೃತ್ಯದ ಬಳಿಕ ಆರೋಪಿ ಸೋಮಲ ವಂಶಿ ಸ್ವತಃ ತಾತೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT