ರಾಜ್ಯೋತ್ಸವ ಮೆರವಣಿಗೆ 
ರಾಜ್ಯ

ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ; ಇಬ್ಬರ ಸ್ಥಿತಿ ಗಂಭೀರ!

ನಗರದ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಬಂದಂತೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಕುಂದಾನಗರಿ ಬೆಳಗಾವಿಯಲ್ಲಿ ಶನಿವಾರ ಆತಂಕಕಾರಿ ಘಟನೆಯೊಂದು ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದಿದ್ದಾರೆ.

ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಬಂದಂತೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಗರದ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಭುವನೇಶ್ವರಿ ಮೂರ್ತಿ ಮೆರವಣಿಗೆ ಮಾಡುತ್ತಾ ಯುವಕರ ಗುಂಪು ನೃತ್ಯ ಮಾಡುತ್ತಿತ್ತು. ಏಕಾಏಕಿ ಗುಂಪಿಗೆ ನುಗ್ಗಿದ ಕೆಲವರು ಜನಸಂದಣಿಯಲ್ಲೇ ಚಾಕು ಹಾಗೂ ಜಂಬೆಗಳಿಂದ ಚುಚ್ಚಿದರು. ಯುವಕರು ನೆಲಕ್ಕೆ ಬಿದ್ದು ರಕ್ತಸ್ರಾವದಿಂದ ಒದ್ದಾಡುತ್ತಿದ್ದಂತೆಯೇ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಗಾಯಗೊಂಡವರನ್ನು ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ ಹಾಗೂ ನಜೀರ್ ಪಠಾಣ್ ಎಂದು ಗುರುತಿಸಲಾಗಿದೆ. ತಲೆ, ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಚಾಕು ಇರಿತದಿಂದ ಗಾಯಗಳಾಗಿವೆ.

ಕೂಡಲೇ ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಭೂಷಣ ಭೊರಸೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ