ಭೂಕಂಪನ (ಸಾಂದರ್ಭಿಕ ಚಿತ್ರ) online desk
ರಾಜ್ಯ

ಕಲಬುರಗಿ: ಮಳಸಾಪೂರ ಸೇರಿ ಹಲವಡೆ ಭೂಕಂಪನ, ಗ್ರಾಮಸ್ಥರಲ್ಲಿ ಆತಂಕ

ಭೂಕಂಪನದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪದ ಕೇಂದ್ರ ಬಿಂದುವಿನಿಂದ 30-40 ಕಿ.ಮೀ. ಗರಿಷ್ಠ ರೇಡಿಯಲ್ ದೂರದವರೆಗೆ ಕಂಪನದ ಅನುಭವವಾಗಬಹುದು.

ಕಲಬುರಗಿ: ಕಲಬುರಗಿ ಜಿಲ್ಲೆಯ ಮರಗುತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಸಾಪೂರ ಗ್ರಾಮ ಸೇರಿದಂತೆ ಹಲವೆಡೆ ಶನಿವಾರ ಭೂ ಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲಾಗಿದೆ.

ಭೂಕಂಪನದಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಮನೆಗಳಿಂದ ಹೊರಬಂದಿದ್ದಾರೆ. ಈ ಕುರಿತು ಮಾಹಿತಿ ಅರಿತ ಕಮಲಾಪುರ ತಾಲ್ಲೂಕು ತಹಶೀಲ್ದಾರ್ ಅವರು ಮಳಸಾಪೂರ ಮತ್ತು ಪಟವಾದ ಗ್ರಾಮಕ್ಕೆ ಭೇಟಿ ನೀಡಿ. ಸಾರ್ವಜನಿಕರಿಗೆ ಭೂಕಂಪನ ಕುರಿತು ವಿಚಾರಿಸಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿದ್ದಾರೆ.

ಭೂಕಂಪನದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪದ ಕೇಂದ್ರ ಬಿಂದುವಿನಿಂದ 30-40 ಕಿ.ಮೀ. ಗರಿಷ್ಠ ರೇಡಿಯಲ್ ದೂರದವರೆಗೆ ಕಂಪನದ ಅನುಭವವಾಗಬಹುದು.

ಈ ರೀತಿಯ ಭೂಕಂಪವು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ, ಆದರೂ ಸ್ಥಳೀಯವಾಗಿ ಸ್ವಲ್ಪ ಕಂಪನ ಕಂಡುಬರಬಹುದು. ಭೂಕಂಪದ ಕೇಂದ್ರ ಬಿಂದುವು ಭೂಕಂಪ ವಲಯ II ರ ಆಳದಲ್ಲಿ ಕಂಡು ಬರುತ್ತದೆ, ಅಲ್ಲಿ ಭೂಕಂಪದಿಂದ ಹಾನಿಯಾಗುವ ಸಾಧ್ಯತೆ ತುಂಬಾ ಕಡಿಮೆ ಎಂದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಸಕ್ಕೆ ಎಸೆದಿದ್ದ ಲಾಟರಿ ಟಿಕೆಟ್ ಗೆ ಬಂಪರ್ ಬಹುಮಾನ! ಕೊನೆಗೂ ಹುಡುಕಾಡಿ ಬರೋಬ್ಬರಿ 10.9 ಕೋಟಿ ರೂ ಗೆದ್ದ ಮಹಿಳೆ!

UK ಮಕ್ಕಳ ಮೇಲಿನ ಅತ್ಯಾಚಾರ, ಕಳ್ಳಸಾಗಣೆ ಪ್ರಕರಣದ ಆರೋಪಿ ಈಗ ಪಿಒಕೆ ಸಂಸದ!