ಭೂಕಂಪನ (ಸಾಂದರ್ಭಿಕ ಚಿತ್ರ) online desk
ರಾಜ್ಯ

ಕಲಬುರಗಿ: ಮಳಸಾಪೂರ ಸೇರಿ ಹಲವಡೆ ಭೂಕಂಪನ, ಗ್ರಾಮಸ್ಥರಲ್ಲಿ ಆತಂಕ

ಭೂಕಂಪನದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪದ ಕೇಂದ್ರ ಬಿಂದುವಿನಿಂದ 30-40 ಕಿ.ಮೀ. ಗರಿಷ್ಠ ರೇಡಿಯಲ್ ದೂರದವರೆಗೆ ಕಂಪನದ ಅನುಭವವಾಗಬಹುದು.

ಕಲಬುರಗಿ: ಕಲಬುರಗಿ ಜಿಲ್ಲೆಯ ಮರಗುತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಸಾಪೂರ ಗ್ರಾಮ ಸೇರಿದಂತೆ ಹಲವೆಡೆ ಶನಿವಾರ ಭೂ ಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲಾಗಿದೆ.

ಭೂಕಂಪನದಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಮನೆಗಳಿಂದ ಹೊರಬಂದಿದ್ದಾರೆ. ಈ ಕುರಿತು ಮಾಹಿತಿ ಅರಿತ ಕಮಲಾಪುರ ತಾಲ್ಲೂಕು ತಹಶೀಲ್ದಾರ್ ಅವರು ಮಳಸಾಪೂರ ಮತ್ತು ಪಟವಾದ ಗ್ರಾಮಕ್ಕೆ ಭೇಟಿ ನೀಡಿ. ಸಾರ್ವಜನಿಕರಿಗೆ ಭೂಕಂಪನ ಕುರಿತು ವಿಚಾರಿಸಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿದ್ದಾರೆ.

ಭೂಕಂಪನದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪದ ಕೇಂದ್ರ ಬಿಂದುವಿನಿಂದ 30-40 ಕಿ.ಮೀ. ಗರಿಷ್ಠ ರೇಡಿಯಲ್ ದೂರದವರೆಗೆ ಕಂಪನದ ಅನುಭವವಾಗಬಹುದು.

ಈ ರೀತಿಯ ಭೂಕಂಪವು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ, ಆದರೂ ಸ್ಥಳೀಯವಾಗಿ ಸ್ವಲ್ಪ ಕಂಪನ ಕಂಡುಬರಬಹುದು. ಭೂಕಂಪದ ಕೇಂದ್ರ ಬಿಂದುವು ಭೂಕಂಪ ವಲಯ II ರ ಆಳದಲ್ಲಿ ಕಂಡು ಬರುತ್ತದೆ, ಅಲ್ಲಿ ಭೂಕಂಪದಿಂದ ಹಾನಿಯಾಗುವ ಸಾಧ್ಯತೆ ತುಂಬಾ ಕಡಿಮೆ ಎಂದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT