ಜಮೀರ್ ಅಹ್ಮದ್ ಖಾನ್ 
ರಾಜ್ಯ

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ; ಜೆಡಿಎಸ್ ಕಿಡಿ, Video

ನಿನ್ನೆ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಮೀರ್ ಮಾಡಿದ್ದ ಭಾಷಣ ಇದೀಗ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದೆ ಕನ್ನಡ ಭಾಷೆಗೆ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಅಪಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಹೌದು.. ನಿನ್ನೆ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಮೀರ್ ಮಾಡಿದ್ದ ಭಾಷಣ ಇದೀಗ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಕನ್ನಡದ ಹಿನ್ನೆಲೆ ಗೊತ್ತಿಲ್ಲದ ಸಚಿವ ಜಮೀರ್ ಅಹ್ಮದ್ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಕನ್ನಡ ಬಗ್ಗೆ ತಪ್ಪು ಸಂದೇಶ ರವಾನಿಸಿ ಅಪಮಾನ ಮಾಡಿದ್ದಾರೆ ಎಂದು ಜೆಡಿಎಸ್ ಗುಡುಗಿದೆ.

ಜಮೀರ್ ಅಹ್ಮದ್ ಖಾನ್ ಓರ್ವ ಇತಿಹಾಸದ ಜ್ಞಾನವಿಲ್ಲದ ಅಜ್ಞಾನಿ ಎಂದು ಜೆಡಿಎಸ್ ಕಿಡಿಕಾರಿದ್ದು, ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜನತಾದಳ (ಜಾತ್ಯಾತೀತ), 'ಕನ್ನಡ ರಾಜ್ಯೋತ್ಸವ ದಿನದಂದೇ ಭಾಷೆ ಹಿನ್ನೆಲೆ ಗೊತ್ತಿಲ್ಲದೇ ಮಾತನಾಡಿರುವುದು ಕನ್ನಡಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು 2000 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಕನ್ನಡ ಭಾಷೆ ಹಾಗೂ ಕರ್ನಾಟಕ ಇತಿಹಾಸದ ಜ್ಞಾನವಿಲ್ಲದ ಅಜ್ಞಾನಿ B.Z.ಜಮೀರ್ ಅಹ್ಮದ್ ಖಾನ್ ಗೆ ನಾಚಿಕೆಯಾಗಬೇಕು' ಎಂದು ಪೋಸ್ಟ್ ಮಾಡಿದೆ.

ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿ ಶಾಸ್ತ್ರೀಯ ಭಾಷೆ ಸ್ಥಾನಮಾನ ಹೊಂದಿರುವ ಕನ್ನಡದ ಬಗ್ಗೆ ಸಚಿವ ಜಮೀರ್‌ ರಾಜ್ಯದ ಜನರಿಗೆ ತಪ್ಪು ಸಂದೇಶಗಳನ್ನು ನೀಡಿ ಅಪಮಾನ ಮಾಡಿದ್ದಾರೆ. ಇದನ್ನು ಕನ್ನಡಿಗರು ಸಹಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇಂತಹ ಬೇಜವಾಬ್ದಾರಿ, ಅವಿವೇಕಿ ಮಂತ್ರಿ ಜಮೀರ್‌ರನ್ನು ಸಂಪುಟದಿಂದ ಮೊದಲು ವಜಾಗೊಳಿಸಬೇಕು' ಎಂದು ಜೆಡಿಎಸ್ ಆಗ್ರಹಿಸಿದೆ.

ವಿಡಿಯೋ ವೈರಲ್

ಇನ್ನು ಜಮೀರ್ ಅಹ್ಮದ್ ಖಾನ್ ರಾಜ್ಯೋತ್ಸವ ವೇದಿಕೆಯ ಭಾಷಣದಲ್ಲಿ ಅವರು ಮಾತನಾಡಿದ ವಿಡಿಯೋ ಹಂಚಿಕೊಳ್ಳಲಾಗಿದೆ. ಆ ವಿಡಿಯೋ ವೈರಲ್ ಆಗುತ್ತಿದೆ.

ಏನು ಹೇಳಿದ್ದರು ಜಮೀರ್?

ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಎರಡು ಬಾರಿ ಜಮೀರ್ ಅಹ್ಮದ್ ಖಾನ್ ಅವರು "ತಪ್ಪು ಮಾಹಿತಿ ಉಚ್ಛಾರ ಮಾಡಿದ್ದಾರೆ. ಕನ್ನಡ ಭಾಷೆಗೆ 200 ವರ್ಷಗಳ ಇತಿಹಾಸ ಇದೆ. ನಾಲ್ಕೈದು ಭಾಷೆಗಳಲ್ಲಿ ಕನ್ನಡ ಒಂದು ಎಂದು ಹೇಳುತ್ತೇನೆ. 1993ರಲ್ಲಿ ಕನ್ನಡ ಅಂತಾ ನಾಮಕರಣ ಮಾಡಲಾಗಿದೆ' ಎಂದು ಹೇಳಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

1973ರಲ್ಲಿ ಕರ್ನಾಟಕ ಎಂದು ನಾಮಕರಣವಾಗಿತ್ತು. ಆದರೆ ಜಮೀರ್ ಅವರು, 1993ರಲ್ಲಿ ಕರ್ನಾಟಕ ಅಂತಾ ಕರೆಯಲಾಯಿತು ಎಂದು ತಿಳಿಸಿದ್ದಾರೆ. ಜೊತೆಗೆ 2000 ವರ್ಷಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ 200 ವರ್ಷಗಳ ಇತಿಹಾಸ ಇದೆ ಎಂದು ಜಮೀರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಸಾಲದ ಹೊರೆ! ಆದರೆ, ಇನ್ನೂ ಅಪಾಯದ ಗಂಟೆ ಮೊಳಗಿಲ್ಲ ಏಕೆ? ಇಲ್ಲಿದೆ ಮಾಹಿತಿ...

ಮಹಿಳಾ ಏಕದಿನ ವಿಶ್ವಕಪ್ 2025: ಚೊಚ್ಚಲ ಪ್ರಶಸ್ತಿ ಗೆದ್ದ ಬೆನ್ನಲ್ಲೇ 'ನಾಯಕತ್ವ' ತ್ಯಜಿಸಲು ಹರ್ಮನ್‌ಪ್ರೀತ್ ಕೌರ್ ಗೆ ಹೆಚ್ಚಿದ ಒತ್ತಡ! ಕಾರಣವೇನು?

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ- ಸಿಎಂ ಸಿದ್ದರಾಮಯ್ಯ

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರ ಮುಂದೂಡಿಕೆ: 'ಸುಪ್ರೀಂ'ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಹೊಸ ತಂತ್ರ!

ಭಾರತದಲ್ಲಿ ಕುಟುಂಬ ರಾಜಕೀಯ ಜನ್ಮಸಿದ್ಧ ಹಕ್ಕು ಎನ್ನುವಂತಾಗಿದೆ: ಶಶಿ ತರೂರ್

SCROLL FOR NEXT