ಸಿಎಂ ಸಿದ್ದರಾಮಯ್ಯ 
ರಾಜ್ಯ

Bengaluru tunnel project: ಟ್ರಾಫಿಕ್ ಸಮಸ್ಯೆ ಹೋಗಲಾಡಿಸುವ ಯೋಜನೆಗೆ ವಿರೋಧವೇಕೆ? ಸಿಎಂ ಸಿದ್ದರಾಮಯ್ಯ

ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಸುರಂಗ ರಸ್ತೆ(Tunnel project) ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧ ಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು? ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ ಎಂದು ಹೇಳಿದ್ದಾರೆ.

ಟನಲ್ ಯೋಜನೆಯನ್ನು ಕಾರು, ಬಸ್, ದ್ವಿಚಕ್ರ ವಾಹನ ಸವಾರರು ಹೀಗೆ ಎಲ್ಲ ವರ್ಗದ ಜನರಿಗೆ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೆಲಂಗಾಣ ರಸ್ತೆ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ICC ಮಹಿಳಾ ಏಕದಿನ ವಿಶ್ವಕಪ್ 2025: ಇತಿಹಾಸ ಬರೆದ ದೀಪ್ತಿ ಶರ್ಮಾ, ಹಲವು ದಾಖಲೆಗಳು, ಪುರುಷರೂ ಮಾಡದ ಸಾಧನೆ!

ಭೈರವ ಮತ್ತು ರುದ್ರ: ಭಾರತದ ನೂತನ ಶಕ್ತಿ

ಮಹಿಳಾ ವಿಶ್ವಕಪ್ ಫೈನಲ್: ದ.ಆಫ್ರಿಕಾದಿಂದ ಗೆಲುವು ಕಸಿದ ಅದ್ಭುತ ಕ್ಯಾಚ್...! Video

Cricket: ವಿಶ್ವ ಚಾಂಪಿಯನ್ ಭಾರತ ವನಿತೆಯರ ತಂಡಕ್ಕೆ ಬಹುಮಾನ ಘೋಷಿಸಿದ BCCI, ಮೊತ್ತ ಎಷ್ಟು ಗೊತ್ತಾ?

SCROLL FOR NEXT