ಇತ್ತೀಚೆಗೆ ಹಾವೇರಿಯಲ್ಲಿ ನಡೆದ ಕೊಬ್ರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓಡುತ್ತಿರುವ ಹೋರಿ 
ರಾಜ್ಯ

ಹೋರಿ ಬೆದರಿಸುವ ಸ್ಪರ್ಧೆ: ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಯೋಜಕರಿಗೆ ಸೂಚನೆ

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಇತ್ತೀಚಿಗೆ ಅವಘಡಗಳು ಹೆಚ್ಚುತ್ತಿದ್ದು, ಹಲವರ ಸಾವಿಗೆ ಕಾರಣವಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ಹೋರಿ ತಿವಿದು ನಾಲ್ವರು ಸಾವನ್ನಪ್ಪಿದ್ದಾರೆ.

ಹಾವೇರಿ: ದೀಪಾವಳಿಯ ನಂತರ ಹಾವೇರಿ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಸಲಾಗುವ ಕೊಬ್ರಿ ಹೋರಿ ಬೆದರಿಸುವ ಸ್ಪರ್ಧೆಗೆ ಹಾವೇರಿ ಪೊಲೀಸರು ಕಟ್ಟು ನಿಟ್ಟಿನ ನಿಯಮಗಳನ್ನು ರೂಪಿಸಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ.

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಇತ್ತೀಚಿಗೆ ಅವಘಡಗಳು ಹೆಚ್ಚುತ್ತಿದ್ದು, ಹಲವರ ಸಾವಿಗೆ ಕಾರಣವಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ಹೋರಿ ತಿವಿದು ನಾಲ್ವರು ಸಾವನ್ನಪ್ಪಿದ್ದಾರೆ.

ಕೊಬ್ರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಜಲ್ಲಿಕಟ್ಟು ಸ್ಪರ್ಧೆಯಂತೆಯೇ, ಗೂಳಿಗಳು ಒಂದು ತುದಿಯಿಂದ ಇನ್ನೊಂದು ತುದಿಗೆ ಓಡುತ್ತವೆ. ಹೋರಿಗಳು ಓಟವನ್ನು ಪೂರ್ಣಗೊಳಿಸುವ ಮೊದಲು ಅವುಗಳನ್ನು ಹಿಡಿಯಬೇಕು. ಈ ಸಮಯದಲ್ಲಿ ಅನೇಕ ಯುವಕರು ಮತ್ತು ಪಕ್ಕದಲ್ಲಿ ಕುಳಿತವರಿಗೆ ಹೋರಿ ತಿವಿದು ಹಲವರು ಗಾಯಗೊಂಡಿದ್ದಾರೆ ಮತ್ತು ಕೆಲವರು ಸಾವನ್ನಪ್ಪಿದ್ದಾರೆ. ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು, ಈ ಸ್ಪರ್ಧೆಯನ್ನು ಆಯೋಜಿಸುವ ಪ್ರಮುಖರೊಂದಿಗೆ ಸಭೆ ನಡೆಸಿದರು.

ನಿಯಮಗಳ ಪ್ರಕಾರ, ಸ್ಥಳೀಯ ತಹಶೀಲ್ದಾರ್ ಕಚೇರಿಗೆ ಕೊಬ್ರಿ ಹೋರಿ ಬೆದರಿಸುವ ಸ್ಪರ್ಧೆ ಬಗ್ಗೆ ಎರಡು ವಾರಗಳ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಈ ಕಾರ್ಯಕ್ರಮದ ಸಮಯದಲ್ಲಿ ಜನರ ಸುರಕ್ಷತೆ ಮತ್ತು ಭದ್ರತೆಗಾಗಿ ವ್ಯವಸ್ಥೆಗಳನ್ನು ಪರಿಶೀಲಿಸುತ್ತಾರೆ. ಈ ಸಂಬಂಧ ಪಶುಸಂಗೋಪನೆ ಮತ್ತು ಗೃಹ ಇಲಾಖೆಯು 2022 ರಲ್ಲಿ ವಿವರವಾದ ನಿಯಮಗಳನ್ನು ರೂಪಿಸಿತ್ತು ಮತ್ತು ಅದನ್ನು ಜಾರಿಗೆ ತರಲಾಗುತ್ತಿದೆ. ಪೊಲೀಸರು ಅಥವಾ ಸ್ಥಳ ಆಡಳಿತ ಈ ಕ್ರೀಡೆಗೆ ವಿರುದ್ಧವಾಗಿಲ್ಲ. ಆದರೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು" ಎಂದು ಅಧಿಕಾರಿ ಹೇಳಿದ್ದಾರೆ.

ಕೋಬ್ರಿ ಹೋರಿ ಬೆದರಿಸುವ ಸ್ಪರ್ಧೆ ದೀಪಾವಳಿ ಹಬ್ಬದ ನಂತರ ಪ್ರಾರಂಭವಾಗಿ ಯುಗಾದಿ ಹಬ್ಬದವರೆಗೆ ಮುಂದುವರಿಯುತ್ತವೆ. ಹಲವು ಬಾರಿ ಆಯೋಜಕರು ಪೊಲೀಸರಿಗೆ ಮಾಹಿತಿ ನೀಡುವುದಿಲ್ಲ ಮತ್ತು ಸಾವುಗಳು ಸಂಭವಿಸಿದಾಗ ಆಡಳಿತ ಮಂಡಳಿಯು ಘಟನೆಯ ಬಗ್ಗೆ ಗಮನ ಸೆಳೆಯುತ್ತದೆ.

ಹಾವೇರಿಯಲ್ಲಿ ನಡೆದ ಕೊಬ್ರಿ ಹೋರಿ ಸ್ಪರ್ಧೆಯಲ್ಲಿ ಓಡುತ್ತಿರುವ ಹೋರಿಯನ್ನು ಪಳಗಿಸಲು ಯುವಕರು ಯತ್ನಿಸುತ್ತಿದ್ದಾರೆ.

"38 ಡಿಗ್ರಿಗಿಂತ ಹೆಚ್ಚಿನ ತಾಪಮಾನದಲ್ಲಿ ಹೋರಿಗಳು ಯಾವುದೇ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವಂತಿಲ್ಲ. ಕಾರ್ಯಕ್ರಮದ ಸಮಯದಲ್ಲಿ ಅಥವಾ ಮೊದಲು ಹೋರಿಗಳಿಗೆ ಯಾವುದೇ ನಿದ್ರಾಜನಕ ಅಥವಾ ಮದ್ಯವನ್ನು ನೀಡಬಾರದು. ಹೋರಿಗಳ ಬೆನ್ನಿಗೆ ಮೆಣಸಿನ ಪುಡಿ ಲೇಪಿತ ಎಣ್ಣೆಯನ್ನು ಬಳಸುವುದನ್ನು ಸಹ ನಿರ್ಬಂಧಿಸಲಾಗುತ್ತಿದೆ.

ಆದರೆ ಪ್ರತಿ ವರ್ಷವೂ ಇಂತಹ ಹಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಇದು ಸ್ಪರ್ಧೆಯ ಉತ್ಸಾಹವನ್ನು ಕಡಿಮೆ ಮಾಡುತ್ತದೆ ಎಂದು ಆಯೋಜಕರು ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್‌ ನಗರ: ಮೊದಲ ಮುಸ್ಲಿಂ ಮೇಯರ್ ಆಗಿ ಭಾರತೀಯ-ಅಮೆರಿಕನ್ ಜೋಹ್ರಾನ್ ಮಮ್ದಾನಿ ಆಯ್ಕೆ

ಅಮೆರಿಕದ ಕೆಂಟುಕಿಯಲ್ಲಿ ಟೇಕಾಫ್ ಆದ UPS cargo ವಿಮಾನ ಸ್ಫೋಟಗೊಂಡು ಪತನ: ಕನಿಷ್ಠ 3 ಸಾವು, 11 ಮಂದಿಗೆ ಗಾಯ-Video

ಮೊದಲು ಮತದಾನ ನಂತರ ಉಪಹಾರ: ಮಹಿಳಾ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಮಂತ್ರ!

ಬಿಹಾರದಲ್ಲಿ ಬದಲಾವಣೆಗಾಗಿ ತೇಜಸ್ವಿ ಯಾದವ್ ಸಿಎಂ ಆಗಬೇಕು: ಡಿ.ಕೆ. ಶಿವಕುಮಾರ್

ಅಮೆರಿಕಾದಲ್ಲಿ ಟ್ವಿನ್ ಟವರ್ ದಾಳಿ ನಂತರ ಇಡೀ ಪ್ರಪಂಚದಲ್ಲಿಯೇ ಬೆಂಗಳೂರು ಸುರಕ್ಷಿತ ಜಾಗ: ಡಿ.ಕೆ.ಶಿವಕುಮಾರ್

SCROLL FOR NEXT