ಈಶ್ವರ ಖಂಡ್ರೆ 
ರಾಜ್ಯ

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು; ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ

ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.

ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವಿಗೀಡಾಗಿರುವ ಘಟನೆಯ ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ಆದೇಶಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.

ಈ ಘಟನೆಯನ್ನು 'ದುರದೃಷ್ಟಕರ' ಎಂದು ಬಣ್ಣಿಸಿದ ಸಚಿವರು, ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಆನೆಗಳು ಇದ್ದರೂ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳನ್ನು ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಐದು ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಮತ್ತು ಯಾವುದೇ ಲೋಪಗಳು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸುಗಳನ್ನು ಸಲ್ಲಿಸುವಂತೆ ಸಚಿವರು ಮುಖ್ಯ ವನ್ಯಜೀವಿ ವಾರ್ಡನ್‌ಗೆ ನಿರ್ದೇಶಿಸಿದ್ದಾರೆ.

ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಂಡ್ರೆ ಎಚ್ಚರಿಸಿದ್ದು, ವಿದ್ಯುತ್ ಸಂಪರ್ಕ ನೀಡಿದ್ದರಿಂದಾಗಿಯೇ ಆನೆಗಳ ಸಾವು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಸಾಲದ ಹೊರೆ! ಆದರೆ, ಇನ್ನೂ ಅಪಾಯದ ಗಂಟೆ ಮೊಳಗಿಲ್ಲ ಏಕೆ? ಇಲ್ಲಿದೆ ಮಾಹಿತಿ...

ಮಹಿಳಾ ಏಕದಿನ ವಿಶ್ವಕಪ್ 2025: ಚೊಚ್ಚಲ ಪ್ರಶಸ್ತಿ ಗೆದ್ದ ಬೆನ್ನಲ್ಲೇ 'ನಾಯಕತ್ವ' ತ್ಯಜಿಸಲು ಹರ್ಮನ್‌ಪ್ರೀತ್ ಕೌರ್ ಗೆ ಹೆಚ್ಚಿದ ಒತ್ತಡ! ಕಾರಣವೇನು?

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ- ಸಿಎಂ ಸಿದ್ದರಾಮಯ್ಯ

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರ ಮುಂದೂಡಿಕೆ: 'ಸುಪ್ರೀಂ'ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಹೊಸ ತಂತ್ರ!

ಭಾರತದಲ್ಲಿ ಕುಟುಂಬ ರಾಜಕೀಯ ಜನ್ಮಸಿದ್ಧ ಹಕ್ಕು ಎನ್ನುವಂತಾಗಿದೆ: ಶಶಿ ತರೂರ್

SCROLL FOR NEXT