ಆನೆ ಸೆರೆ 
ರಾಜ್ಯ

ಚಿಕ್ಕಮಗಳೂರು: ಇಬ್ಬರನ್ನು ತುಳಿದು ಕೊಂದಿದ್ದ ಆನೆ ಸೆರೆ!

ಕುದುರೆಮುಖ ವನ್ಯಜೀವಿ ವಿಭಾಗದ ಕೆರೆಕಟ್ಟೆ ವ್ಯಾಪ್ತಿಯಲ್ಲಿ ಉಮೇಶ್ (43) ಮತ್ತು ಹರೀಶ್ (42) ಅಕ್ಟೋಬರ್ 31 ರಂದು ಆನೆ ದಾಳಿಗೆ ಸಾವನ್ನಪ್ಪಿದ್ದಾರೆ ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.

ನವದೆಹಲಿ: ಚಿಕ್ಕಮಗಳೂರಿನಲ್ಲಿ ಇಬ್ಬರು ಜನರನ್ನು ತುಳಿದು ಕೊಂದ 40 ವರ್ಷದ ಆನೆಯನ್ನು ಸುದೀರ್ಘ 17 ಗಂಟೆಗಳ ಕಾರ್ಯಾಚರಣೆಯ ನಂತರ ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ.

ಕುದುರೆಮುಖ ವನ್ಯಜೀವಿ ವಿಭಾಗದ ಕೆರೆಕಟ್ಟೆ ವ್ಯಾಪ್ತಿಯಲ್ಲಿ ಉಮೇಶ್ (43) ಮತ್ತು ಹರೀಶ್ (42) ಅಕ್ಟೋಬರ್ 31 ರಂದು ಆನೆ ದಾಳಿಗೆ ಸಾವನ್ನಪ್ಪಿದ್ದಾರೆ ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.

ಇಬ್ಬರೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಹೊರವಲಯದಲ್ಲಿ ವಾಸಿಸುತ್ತಿದ್ದರು ಮತ್ತು ದನದ ಕೊಟ್ಟಿಗೆಗೆ ಎಲೆಗಳನ್ನು ಸಂಗ್ರಹಿಸಲು ಕಾಡಿಗೆ ಹೋಗಿದ್ದರು, ಆನೆ ಅವರ ಮೇಲೆ ದಾಳಿ ಮಾಡಿತು, ಇದರ ಪರಿಣಾಮವಾಗಿ ಅವರು ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಪ್ರಕಾರ, ಭಾನುವಾರ ಬೆಳಿಗ್ಗೆ, ಐದು ತರಬೇತಿ ಪಡೆದ ಆನೆಗಳೊಂದಿಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸುಮಾರು 150 ಅಧಿಕಾರಿಗಳು ಈ ಜಿಲ್ಲೆಯ ಭಗವತಿ ಪ್ರಕೃತಿ ಶಿಬಿರದ ಬಳಿ ಕಂಡುಬಂದ ಆನೆಯನ್ನು ಪಶುವೈದ್ಯರು ಟ್ರ್ಯಾಂಕ್ವಿಲೈಜರ್ ಡಾರ್ಟ್ ಹಾರಿಸಿ, ಸೆರೆಹಿಡಿದಿದ್ದಾರೆ.

"ಮುಖ್ಯ ವನ್ಯಜೀವಿ ವಾರ್ಡನ್ ಅವರ ಅನುಮತಿಯ ಮೇರೆಗೆ, ಕರ್ನಾಟಕ ಅರಣ್ಯ ಇಲಾಖೆಯು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಭಗವತಿ ಪ್ರಕೃತಿ ಶಿಬಿರದ ಬಳಿ "ಮಲ್ಲಂದೂರ್" (ಕಾಡು) ಆನೆಯನ್ನು ಸುರಕ್ಷಿತವಾಗಿ ನಿಶ್ಚಲಗೊಳಿಸಲಾಯಿತು ಎಂದು ಹಿರಿಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಯಾವುದೇ ಸಿಬ್ಬಂದಿ ಅಥವಾ ಸಾರ್ವಜನಿಕರು ಗಾಯಗೊಂಡಿಲ್ಲ ಎಂದು ಅವರು ಹೇಳಿದರು."ಶಾಂತಗೊಳಿಸಿದ ಆನೆಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗುತ್ತದೆ ಮತ್ತು ಪ್ರಸ್ತುತ ಸೆರೆ ಹಿಡಿದ ಆನೆಯನ್ನು ದೊಡ್ಡ ಹರವೆ ಆನೆ ಶಿಬಿರದಲ್ಲಿ ವೀಕ್ಷಣೆಯಲ್ಲಿ ಇರಿಸಲಾಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!