ಆರ್ ಎಸ್ ಎಸ್ ಪಥ ಸಂಚಲನ 
ರಾಜ್ಯ

ಕಾಂಗ್ರೆಸ್‌ ಜಾಲದಲ್ಲಿ ಸಿಕ್ಕಿಬೀಳಬೇಡಿ; ಪಥಸಂಚಲನ ವಿವಾದಕ್ಕೆ ಉದ್ವೇಗದ ಹೇಳಿಕೆ ಬೇಡ: BJP ನಾಯಕರಿಗೆ 'ಸಂಘ' ಸೂಚನೆ!

RSS ವಿರೋಧಿಸುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವರ ಹೇಳಿಕೆಗಳಿಗೆ ಪ್ರತ್ಯುತ್ತರಿಸುವ ಭರದಲ್ಲಿ ಆತುರದ, ಉದ್ವೇಗದ ಹೇಳಿಕೆ ನೀಡಿ ಕಾಂಗ್ರೆಸ್ ಜಾಲದಲ್ಲಿ ಸಿಕ್ಕಿಬೀಳಬೇಡಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಬಿಜೆಪಿ ನಾಯಕರಿಗೆ ಸೂಚಿಸಿದೆ.

ಬೆಂಗಳೂರು: ಆರ್‌ಎಸ್‌ಎಸ್‌ ಹಾಗೂ ರಾಜ್ಯ ಸರ್ಕಾರದ ಮಧ್ಯೆ ನಡೆಯುತ್ತಿರುವ ಜಟಾಪಟಿ ವಿಚಾರದಲ್ಲಿ ಉದ್ವೇಗದ ಹೇಳಿಕೆ ನೀಡಬೇಡಿ. ಪಥಸಂಚಲನ ವಿಚಾರಕ್ಕೂ ಪ್ರತಿಕ್ರಿಯಿಸಬೇಡಿ ಎಂದು ಸಂಘದ ಪ್ರಮುಖರು ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.

RSS ವಿರೋಧಿಸುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವರ ಹೇಳಿಕೆಗಳಿಗೆ ಪ್ರತ್ಯುತ್ತರಿಸುವ ಭರದಲ್ಲಿ ಆತುರದ, ಉದ್ವೇಗದ ಹೇಳಿಕೆ ನೀಡಿ ಕಾಂಗ್ರೆಸ್ ಜಾಲದಲ್ಲಿ ಸಿಕ್ಕಿಬೀಳಬೇಡಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಬಿಜೆಪಿ ನಾಯಕರಿಗೆ ಸೂಚಿಸಿದೆ.

ರಾಜ್ಯದಲ್ಲಿ ಆರೆಸ್ಸೆಸ್‌ ಪಥ ಸಂಚಲನದ ಹಿನ್ನೆಲೆಯಲ್ಲಿ ಎದ್ದಿರುವ ವಿವಾದ ಪಥ ಸಂಚಲನಕ್ಕೆ ಅನುಮತಿ ನೀಡದಿರುವುದು ಹಾಗೂ ಕಾನೂನು ಸಮರದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರ ಜೊತೆ ಆರ್‌ಎಸ್‌ಎಸ್ ಮಹತ್ವದ ಬೈಠಕ್ ನಡೆಸಿತು.

ಮಧ್ಯಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ ಸೇರಿದಂತೆ ಸಂಘದ ಪ್ರಮುಖರು ಹಾಗೂ ಬಿಜೆಪಿ ನಾಯಕರು ಭಾಗವಹಿಸಿದ್ದ ಚಿಂತನಾ ಸಭೆಯಲ್ಲಿ ಸೋಮವಾರ ಈ ಸೂಚನೆ ನೀಡಲಾಗಿದ್ದು, ಸಂಘ, ಸಿದ್ಧಾಂತ, ರಾಜಕೀಯ ಹೋರಾಟಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಧ್ವನಿ ಒಂದೇ ಆಗಿರಲಿ. ಹತ್ತು ಜನರಿಂದ ಹತ್ತು ಅಭಿಪ್ರಾಯ ಹೊಮ್ಮಿದರೆ ಇನ್ನಷ್ಟು ಗೊಂದಲ ಸೃಷ್ಟಿಯಾಗುತ್ತದೆ ಎಂದು ಸೂಚನೆ ನೀಡಲಾಗಿದೆ.

ಶತಾಬ್ದಿ ವರ್ಷದಲ್ಲಿರುವ ಸಂಘ ಇದುವರೆಗೆ ಹಲವು ಸವಾಲುಗಳನ್ನು ಎದುರಿಸಿದೆ. ಎರಡು ಬಾರಿ ನಿಷೇಧಕ್ಕೆ ಒಳಗಾಗಿದ್ದರೂ ಮತ್ತೆ ಜನಮಾನಸದಲ್ಲಿ ಸ್ಥಾನಪಡೆದಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಎದುರಾಗುವ ಸಂದಿಗ್ಧತೆಗಳನ್ನು ಅದು ಎದುರಿಸುತ್ತದೆ. ಇದರಲ್ಲಿ ಪಕ್ಷವಾಗಿ ಉದ್ವೇಗದ ಹೇಳಿಕೆ ನೀಡುವುದು ಬೇಡ. ಪಥಸಂಚಲನ ವಿವಾದಕ್ಕೆ ಸಂಬಂಧಪಟ್ಟಂತೆಯೂ ಹೇಳಿಕೆ ನೀಡುವುದು ಬೇಡ ಎಂಬ ನಿರ್ದೇಶನವನ್ನು ನೀಡಲಾಗಿದೆ.

ಆರ್‌ಎಸ್‌ಎಸ್ ವಿರುದ್ಧದ ಷಡ್ಯಂತ್ರ ಎದುರಿಸಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವುದು. ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಬಯಲಿಗೆಳೆದು ಕಾಂಗ್ರೆಸ್ ನಾಯಕರ ತಂತ್ರಕ್ಕೆ ಪ್ರತಿತಂತ್ರ ಹೆಣೆಯುವುದು. ಕಾಂಗ್ರೆಸ್ ವಿರುದ್ಧ ಪರಿಣಾಮಕಾರಿ ಹೋರಾಟ ರೂಪಿಸುವುದು ಬೈಠಕ್‌ನ ನಿರ್ಣಯಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT