ಬಿ ವೈ ವಿಜಯೇಂದ್ರ  
ರಾಜ್ಯ

ಪರಿಶಿಷ್ಟ ಪಂಗಡಗಳು ಕಾಂಗ್ರೆಸ್ ಗೆ ಕೇವಲ ಮತಬ್ಯಾಂಕ್ ಮಾತ್ರ: ವಿಜಯೇಂದ್ರ

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯನ್ನು 'ಜನಜಾತಿಯ ಗೌರವ್ ದಿವಸ್' (ಬುಡಕಟ್ಟು ಹೆಮ್ಮೆಯ ದಿನ) ಎಂದು ಘೋಷಿಸುವ ಮೋದಿಯವರ ನಿರ್ಧಾರವನ್ನು ಶ್ಲಾಘಿಸಿದರು

ಬೆಂಗಳೂರು: ಭಾರತದ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪರಿಶಿಷ್ಟ ಪಂಗಡಗಳನ್ನು ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಪಕ್ಷದ ರಾಜ್ಯ ಪ್ರಧಾನ ಕಚೇರಿ 'ಜಗನ್ನಾಥ ಭವನ'ದಲ್ಲಿ ನಡೆದ ಬಿಜೆಪಿಯ ಎಸ್‌ಟಿ ಮೋರ್ಚಾ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, 2014 ರಿಂದ ಸಮುದಾಯವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಬುಡಕಟ್ಟು ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುವ ಗುರಿಯನ್ನು ಹೊಂದಿರುವ ಸರ್ಕಾರದ ಯೋಜನೆಗಳ ಬಗ್ಗಮ ಮಾಹಿತಿ ನೀಡಿದರು.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯನ್ನು 'ಜನಜಾತಿಯ ಗೌರವ್ ದಿವಸ್' (ಬುಡಕಟ್ಟು ಹೆಮ್ಮೆಯ ದಿನ) ಎಂದು ಘೋಷಿಸುವ ಮೋದಿಯವರ ನಿರ್ಧಾರವನ್ನು ಶ್ಲಾಘಿಸಿದರು. ಇದು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬುಡಕಟ್ಟು ಜನಾಂಗದವರ ಪಾತ್ರವನ್ನು ಮತ್ತು ಸ್ಥಳೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸುವ ಅವರ ಪ್ರಯತ್ನಗಳನ್ನು ಅಂಗೀಕರಿಸುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಬಜೆಟ್‌ನಿಂದ ಬುಡಕಟ್ಟು ಕಲ್ಯಾಣಕ್ಕಾಗಿ ವಾರ್ಷಿಕ ಹಂಚಿಕೆಗಳನ್ನು ವಿಜಯೇಂದ್ರ ಉಲ್ಲೇಖಿಸಿದರು, 2014-15ರಲ್ಲಿ ರೂ 4,427.96 ಕೋಟಿ, 2018-19ರಲ್ಲಿ ರೂ 6,000 ಕೋಟಿ, 2021-22ರಲ್ಲಿ ರೂ 7,524.87 ಕೋಟಿ, 2023-24ರಲ್ಲಿ ರೂ 12,461 ಕೋಟಿ, 2024-25ರಲ್ಲಿ ರೂ 13,000 ಕೋಟಿ ಮತ್ತು 2025-26ಕ್ಕೆ ರೂ 14,925.81 ಕೋಟಿಗೆ ಮೀಸಲಿಟ್ಟಿದೆ ಎಂದರು.

ಈ ಅಂಕಿಅಂಶಗಳು ಸ್ವತಂತ್ರ ಭಾರತದ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ. ಯಾವುದೇ ಸರ್ಕಾರವು ಬುಡಕಟ್ಟು ಅಭಿವೃದ್ಧಿಗೆ ಇಷ್ಟೊಂದು ಗಣನೀಯ ಸಂಪನ್ಮೂಲಗಳನ್ನು ಹಂಚಿಕೆ ಮಾಡಿಲ್ಲ ಎಂದು ಪ್ರತಿಪಾದಿಸಿದರು. ಮೋದಿ "ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಬೇರೂರಿರುವ" ನಾಯಕ, ಅವರು ಸಮಾಜದ ಎಲ್ಲಾ ವರ್ಗಗಳನ್ನು ಪರಿಗಣಿಸುತ್ತಾರೆ ಎಂದು ಬಣ್ಣಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT