ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ; ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲು!

ಬೆಳಿಗ್ಗೆ 7.49ಕ್ಕೆ ಭೂಮಿ ಕಂಪಿಸಿದ್ದು, ವಿಜಯಪುರ ತಾಲ್ಲೂಕಿನ ಭೂತ್ನಾಳ್ ತಾಂಡಾದಿಂದ ವಾಯುವ್ಯಕ್ಕೆ ಸುಮಾರು 3.6 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.

ವಿಜಯಪುರ: ವಿಜಯಪುರದಲ್ಲಿ ಮಂಗಳವಾರ ಬೆಳಿಗ್ಗೆ ಮತ್ತೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಬೆಳಿಗ್ಗೆ 7.49ಕ್ಕೆ ಭೂಮಿ ಕಂಪಿಸಿದ್ದು, ವಿಜಯಪುರ ತಾಲ್ಲೂಕಿನ ಭೂತ್ನಾಳ್ ತಾಂಡಾದಿಂದ ವಾಯುವ್ಯಕ್ಕೆ ಸುಮಾರು 3.6 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.

ಭೂಕಂಪವು ಅಲ್ಪಪ್ರಮಾಣದಲ್ಲಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪನದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪದ ಕೇಂದ್ರಬಿಂದುವಿನಿಂದ 50-60 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಅನುಭವವಾಗಬಹುದು ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

ಅಂತಹ ಭೂಕಂಪವು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಏಕೆಂದರೆ, ತೀವ್ರತೆ ಕಡಿಮೆಯಾಗಿದೆ. ಆದರೂ, ಸ್ಥಳೀಯವಾಗಿ ಕಂಪನದ ಅನುಭವವಾಗಬಹುದು. ಹೀಗಾಗಿ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಅದು ಹೇಳಿದೆ.

ವಿಜಯಪುರ ಜಿಲ್ಲೆ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಕೆಲವು ದಿನಗಳಿಂದ ಭೂಕಂಪಗಳು ಸಂಭವಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!