ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 
ರಾಜ್ಯ

ನಗರದ ಘನತೆ, ಸಂಸ್ಕೃತಿಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ರಚನೆ; ನನಗೂ ಅರಸುಗೂ ಹೋಲಿಕೆ ಬೇಡ: ಸಿಎಂ ಗರಂ!

ಗ್ರೇಟರ್ ಮೈಸೂರು ಆಗಬೇಕು. ಆದರೆ, ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಬಹು ವರ್ಷಗಳ ಕನಸಾದ ‘ಗ್ರೇಟರ್‌ ಮೈಸೂರು’ ರಚನೆ ಮುನ್ನೆಲೆಗೆ ಬಂದಿದ್ದು, ಶೀಘ್ರದಲ್ಲಿಯೇ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆಯುವ ಸಾಧ್ಯತೆ ಇದೆ.

ಗ್ರೇಟರ್ ಮೈಸೂರು ಆಗಬೇಕು. ಆದರೆ, ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ "ಗ್ರೇಟರ್ ಮೈಸೂರು" ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ನೀಲನಕ್ಷೆ ಸಿದ್ಧಪಡಿಸುವಂತೆ ಜಿಲ್ಲಾಡಳಿತಕ್ಕೆ ಸಿಎಂ ಸೂಚನೆ ನೀಡಿದರು.

ಮುಂದಿನ ಅಥವಾ ನಂತರದ ಸಚಿವ ಸಂಪುಟ ಸಭೆಯಲ್ಲಿ ಗ್ರೇಟರ್ ಮೈಸೂರು ರಚನೆಯ ಪ್ರಸ್ತಾವನೆ ಮಂಡಿಸಿ ಅನುಮೋದನೆ ನೀಡಿದ ಬಳಿಕ ರಚನೆಯಾಗಲಿದೆ. ಈ ಎಲ್ಲ ಪ್ರಕ್ರಿಯೆಗಳನ್ನು ಡಿಸೆಂಬರ್ ವೇಳೆಗೆ ಮುಗಿಸಲು ಅಂತಿಮ ಗಡುವು ನೀಡಲಾಗಿದೆ. ಇದರಿಂದಾಗಿ ಅವಧಿ ಮುಗಿದಿರುವ ಮೈಸೂರು ನಗರಪಾಲಿಕೆ ಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ ಎನ್ನಲಾಗಿದೆ.

ಸಿದ್ದಾರ್ಥ ನಗರದಲ್ಲಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ಥಾಪಿಸಿರುವ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಲು ಮುಂದಾದಾಗ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು 2ನೇ ದೇವರಾಜ ಅರಸು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೈ ಎಂದು ಕೂಗಿದರು. ಇದಕ್ಕೆ ಕೆಂಡಮಂಡಲವಾದ ಸಿದ್ದರಾಮಯ್ಯ, ‘ಏಯ್‌ ಯಾರೋ ಅವನು, ದೇವರಾಜ ಅರಸು ಅವರಿಗೆ ಅವರೇ ಸಾಟಿ, ಅವರು ಅವರೇ, ನಾನು ನಾನೇ. ನನಗೂ ಅವರಿಗೂ ಹೋಲಿಕೆ ಮಾಡಬೇಡ, ಸುಮ್ಮನಿರಯ್ಯ’ ಎಂದು ಸುಮ್ಮನಿರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Chhattisgarh: ಭೀಕರ ರೈಲು ಅಪಘಾತ; ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; 6 ಮಂದಿ ಸಾವು!

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; 3,500 ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ; ಬಿಜೆಪಿ ಬೆಂಬಲ; Video

ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ: ಹೊಟ್ಟೆಗೆ ಒದ್ದು ಭ್ರೂಣ ಹೊರತೆಗೆದು ಬಾಲಕನಿಂದ ಭೀಕರ ಕೃತ್ಯ!

Bihar Poll: ಈ ಬಾರಿ 'ಎನ್ ಡಿಎ'ಗೆ ದಾಖಲೆಯ ಗೆಲುವು, ಜಂಗಲ್ ರಾಜ್ ಗೆ ಹೀನಾಯ ಸೋಲು ನಿಶ್ಚಿತ- ಪ್ರಧಾನಿ ಮೋದಿ

"Why Acting Superior?"ಕೆನಡಾದಲ್ಲಿ ಮತ್ತೊಂದು ಜನಾಂಗೀಯ ದಾಳಿ, ಭಾರತೀಯ ಯುವಕನ ಕುತ್ತಿಗೆಗೆ ಕೈ ಹಾಕಿ ಹಲ್ಲೆ, video ವೈರಲ್

SCROLL FOR NEXT