ಸಾಂದರ್ಭಿಕ ಚಿತ್ರ 
ರಾಜ್ಯ

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ

‘ಇಂದಿರಾ ಪೌಷ್ಟಿಕ ಆಹಾರ ಕಿಟ್’ ಬದಲು ಇಂದಿರಾ ಕಿಟ್ ಎಂದು ತೀರ್ಮಾನಿಸಿದೆ. ಅಲ್ಲದೆ, ಕಿಟ್‌ನಲ್ಲಿ ಇರಬೇಕಿದ್ದ ಹೆಸರುಕಾಳಿನ ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧರಿಸಿದೆ.

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಘೋಷಿಸಿದ್ದ ಸರ್ಕಾರ, ಅದರಲ್ಲಿ ನೀಡಲು ಉದ್ದೇಶಿಸಿದ್ದ ಆಹಾರ ಧಾನ್ಯಗಳನ್ನು ಪರಿಷ್ಕರಣೆ ಮಾಡಿದೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ‘ಇಂದಿರಾ ಪೌಷ್ಟಿಕ ಆಹಾರ ಕಿಟ್’ ಬದಲು ಇಂದಿರಾ ಕಿಟ್ ಎಂದು ತೀರ್ಮಾನಿಸಿದೆ. ಅಲ್ಲದೆ, ಕಿಟ್‌ನಲ್ಲಿ ಇರಬೇಕಿದ್ದ ಹೆಸರುಕಾಳಿನ ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧರಿಸಿದೆ.

ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಬಿಪಿಎಲ್ ಮತ್ತು ಅಂತ್ಯೋದಯ ಅನ್ನ ಕಾರ್ಡುದಾರರಿಗೆ ತಲಾ 5 ಕೆ.ಜಿ. ಕೊಡುವ ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರವು 6,426 ಕೋಟಿ ರೂ. ಅನುದಾನ ನಿಗದಿಪಡಿಸಿತ್ತು. ಅಕ್ಕಿಯ ಬದಲು ತೊಗರಿಬೇಳೆ, ಹೆಸರುಕಾಳು, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ಇಂದಿರಾ ಕಿಟ್‌ನ್ನು 6,119 ಕೋಟಿ ರೂ.ನಲ್ಲಿ ಕೊಡಲು ನಿರ್ಧರಿಸಿದ್ದೆವು.

ಇದರಿಂದ 307 ಕೋಟಿ ರೂ. ಉಳಿಸಿದಂತೆಯೂ ಆಗಿತ್ತು. ರಾಜ್ಯದ ತೊಗರಿ ಬೆಳೆಗಾರರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮತ್ತು ಪಡಿತರ ಚೀಟಿದಾರರಿಗೆ ಹೆಚ್ಚಿನ ಪ್ರೋಟಿನ್‌ಯುಕ್ತ ಆಹಾರ ಧಾನ್ಯ ಒದಗಿಸಲು ಹೆಸರುಕಾಳಿನ ವೆಚ್ಚದ ಪ್ರಮಾಣಕ್ಕೆ ಅನುಗುಣವಾಗಿ ಹೆಚ್ಚುವರಿಯಾಗಿ ತೊಗರಿಬೇಳೆಯನ್ನೇ ವಿತರಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಈ ಹಿಂದೆ ಇಂದಿರಾ ಕಿಟ್‌ನಲ್ಲಿ 1 ಕೆ.ಜಿ. ತೊಗರಿಬೇಳೆ, 1 ಕೆ.ಜಿ. ಹೆಸರುಕಾಳು, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ. ಸಕ್ಕರೆ, 1 ಕೆ.ಜಿ. ಉಪ್ಪು ಕೊಡಲು ನಿರ್ಧರಿಸಿತ್ತು. ಇದೀಗ 1 ಹೆಸರುಕಾಳಿನ ಬದಲು 1 ಮತ್ತು 2 ಸದಸ್ಯರಿರುವ ಕುಟುಂಬಕ್ಕೆ ಕಾಲು ಕೆ.ಜಿ. ಹೆಚ್ಚುವರಿ ತೊಗರಿಬೇಳೆ, 3 ಮತ್ತು 4 ಸದಸ್ಯರಿರುವ ಕುಟುಂಬಕ್ಕೆ ಅರ್ಧ ಕೆ.ಜಿ. ಹೆಚ್ಚುವರಿ ತೊಗರಿಬೇಳೆ, 5ಕ್ಕೂ ಹೆಚ್ಚು ಸದಸ್ಯರಿರುವ ಕುಟುಂಬಕ್ಕೆ ಮುಕ್ಕಾಲು ಕೆ.ಜಿ. ಹೆಚ್ಚುವರಿ ತೊಗರಿಬೇಳೆ ವಿತರಣೆ ಮಾಡಲಾಗುತ್ತದೆ.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಇತರೆ ಸಚಿವರು ಉತ್ತರ ಕರ್ನಾಟಕ ಭಾಗದಲ್ಲಿ ತೊಗರಿ ಪ್ರಮುಖ ಬೆಳೆಯಾಗಿರುವುದರಿಂದ ರೈತರ ಹಿತ ಕಾಪಾಡಲು ಹೆಸರುಕಾಳಿನ ಬದಲಿಗೆ ತೊಗರಿಬೇಳೆ ನೀಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ.

ಹೆಸರುಕಾಳಿಗಾಗಿ ನಿಗದಿಪಡಿಸಿದ್ದ ವೆಚ್ಚದಲ್ಲೇ ತೊಗರಿಬೇಳೆಯನ್ನು ಖರೀದಿಸಿ ವಿತರಿಸಲಾಗುವುದು.‌ ಹಾಗಾಗಿ ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆ ಬೀಳುವುದಿಲ್ಲ. ಈ ಹಿಂದೆ ಅನುಮೋದಿಸಲಾದ 6119.52 ಕೋಟಿ ರೂ. ವೆಚ್ಚದಲ್ಲೇ ಪರಿಷ್ಕೃತ ಇಂದಿರಾ ಫುಡ್​​ಕಿಟ್ ನೀಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೊರೆ ಹೊತ್ತುಕೊಳ್ಳಬೇಡಿ, ನಿಮ್ಮ ಮಗನದ್ದು ತಪ್ಪು ಎಂದರೆ ಭಾರತದಲ್ಲಿ ಯಾರೂ ನಂಬುವುದಿಲ್ಲ'; Air India ಪೈಲಟ್ ತಂದೆಗೆ 'ಸುಪ್ರೀಂ' ಸಾಂತ್ವನ

'ವಂದೇ ಮಾತರಂ' ಭಾರತೀಯರಲ್ಲಿ ಹೊಸ ಚೈತನ್ಯ ತುಂಬುತ್ತದೆ: 150ನೇ ವಾರ್ಷಿಕೋತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ

ಏರದ ದರ, ನಿಲ್ಲದ ಕಬ್ಬು ಸಮರ: ಸಚಿವ ಶಿವಾನಂದ್ ಪಾಟೀಲ್ ಮನವಿಗೂ ಜಗ್ಗದ ರೈತರು, 3,500 ದರ ಘೋಷಿಸದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದು ಪಟ್ಟು

ಬಿಹಾರ ಪ್ರಚಾರದ ಕಣದಲ್ಲಿ ಜಂಗಲ್‌ ರಾಜ್‌, ವಲಸೆಯದ್ದೇ ಚರ್ಚೆ (ನೇರ ನೋಟ)

ಬಿಹಾರದಲ್ಲೂ ಮತಗಳ್ಳತನ: ರಕ್ಷಿಸುವ ಹೊಣೆ ಹೊತ್ತವರಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ; ರಾಹುಲ್ ಗಾಂಧಿ ಆರೋಪ

SCROLL FOR NEXT