ಸಿಎಂ ಸಿದ್ದರಾಮಯ್ಯ ಸಭೆ 
ರಾಜ್ಯ

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ತುರ್ತು ಸಭೆ; ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ಹೇರಲು ಆಗ್ರಹ..!

ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

ಬೆಂಗಳೂರು: ಪ್ರತಿ ಟನ್‌ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ 38ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಆರ್.ಬಿ. ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ,

ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

ಸಭೆಯ ಆರಂಭದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವಾದ ಮಂಡಿಸಿದ್ದು, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿ ಉತ್ತಮ ಆಗಲು ರಾಜ್ಯ ಸರ್ಕಾರ ಸಹಕರಿಸಬೇಕು, ಜೊತೆಗೆ ಕಾರ್ಖಾನೆಗಳಿಂದ ಖರೀದಿ ಮಾಡುವ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 5.50 ರೂ. ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ಅಷ್ಟೇ ಅಲ್ಲದೇ, ಸಕ್ಕರೆ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು. ವಾಣಿಜ್ಯ ಮತ್ತು ಗೃಹ ಬಳಕೆ ಸಕ್ಕರೆ ಪ್ರತ್ಯೇಕವಾಗಿ ದರ ಏರಿಕೆ ಮಾಡಬೇಕು. ಎಥೆನಾಲ್ ಹಂಚಿಕೆ ಪ್ರಮಾಣದಲ್ಲಿ ಏರಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!