ಸಿಎಂ ಸಿದ್ದರಾಮಯ್ಯ ಸಭೆ 
ರಾಜ್ಯ

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ತುರ್ತು ಸಭೆ; ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ಹೇರಲು ಆಗ್ರಹ..!

ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

ಬೆಂಗಳೂರು: ಪ್ರತಿ ಟನ್‌ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ 38ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಆರ್.ಬಿ. ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ,

ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

ಸಭೆಯ ಆರಂಭದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವಾದ ಮಂಡಿಸಿದ್ದು, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿ ಉತ್ತಮ ಆಗಲು ರಾಜ್ಯ ಸರ್ಕಾರ ಸಹಕರಿಸಬೇಕು, ಜೊತೆಗೆ ಕಾರ್ಖಾನೆಗಳಿಂದ ಖರೀದಿ ಮಾಡುವ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 5.50 ರೂ. ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ಅಷ್ಟೇ ಅಲ್ಲದೇ, ಸಕ್ಕರೆ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು. ವಾಣಿಜ್ಯ ಮತ್ತು ಗೃಹ ಬಳಕೆ ಸಕ್ಕರೆ ಪ್ರತ್ಯೇಕವಾಗಿ ದರ ಏರಿಕೆ ಮಾಡಬೇಕು. ಎಥೆನಾಲ್ ಹಂಚಿಕೆ ಪ್ರಮಾಣದಲ್ಲಿ ಏರಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಣೆ ಭೂ ಹಗರಣ: ಮಹಾರಾಷ್ಟ್ರ ಸರ್ಕಾರದಿಂದ ಕವರ್‌ಅಪ್? FIR ನಲ್ಲಿ ಅಜಿತ್ ಪವಾರ್ ಪುತ್ರನ ಹೆಸರಿಲ್ಲ, ಆದ್ರೆ...

ಟೋಪಿ ಧರಿಸುವಂತ ಪರಿಸ್ಥಿತಿ ಬಂದರೆ ನನ್ನ ತಲೆಯನ್ನೇ ಕತ್ತರಿಸಿಕೊಳ್ಳುತ್ತೇನೆ: ಸಿಎಂ ರೇವಂತ್ ರೆಡ್ಡಿ ವಿರುದ್ಧ ಬಂಡಿ ಸಂಜಯ್ ವಾಗ್ದಾಳಿ

Mark Teaser: ಕಿಚ್ಚ ಸುದೀಪ್ ಮಾಸ್ ಅವತಾರಕ್ಕೆ ಅಭಿಮಾನಿಗಳು ಫಿದಾ, ಡಿ.25ಕ್ಕೆ ರಸದೌತಣ!

'ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದ ಸರ್ಕಾರದಿಂದ ದಲಿತರ ಭೂಮಿ ಕಳ್ಳತನ': ಮೋದಿ ಮೌನ ಪ್ರಶ್ನಿಸಿದ ರಾಹುಲ್

ಅಕ್ರಮ ಪರಮಾಣು ಚಟುವಟಿಕೆಗಳು ಪಾಕಿಸ್ತಾನದ ದೀರ್ಘಕಾಲೀನ ಅಭ್ಯಾಸ: ಟ್ರಂಪ್ ಹೇಳಿಕೆ ಕುರಿತು ಭಾರತ ತೀಕ್ಷ್ಣ ಪ್ರತಿಕ್ರಿಯೆ!

SCROLL FOR NEXT