ಸಂಗ್ರಹ ಚಿತ್ರ  
ರಾಜ್ಯ

18,000 ಗುಂಡಿ ಮುಚ್ಚಲಾಗಿದೆ; ನವೆಂಬರ್ 10 ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗಳು ಗುಂಡಿ ಮುಕ್ತ: GBA

ನಗರದಲ್ಲಿ ಸುಮಾರು 18 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ಜಂಕ್ಷನ್‌ಗಳ ಅಭಿವೃದ್ಧಿಗೆ 100 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ತಿಳಿಸಿದರು.

ಬೆಂಗಳೂರು: ನವೆಂಬರ್ 10 ರೊಳಗೆ ನಗರದಲ್ಲಿರುವ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ. ನಗರದ ರಸ್ತೆಗಳ ಗುಂಡಿ ಮುಚ್ಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 31 ರ ಗಡುವು ನೀಡಿದ್ದರು.

ನಗರದಲ್ಲಿ ಸುಮಾರು 18 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ಜಂಕ್ಷನ್‌ಗಳ ಅಭಿವೃದ್ಧಿಗೆ 100 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ತಿಳಿಸಿದರು.

1,700 ಕೋಟಿ ವೆಚ್ಚದಲ್ಲಿ 220.68 ಕಿಮೀ ಉದ್ದದ 140 ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, 79.08 ಕಿ.ಮೀ (39 ರಸ್ತೆ) ವೈಟ್ ಟಾಪಿಂಗ್ ಕೆಲಸ ಪೂರ್ಣಗೊಂಡಿದೆ. ಉಳಿದ 101 ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿದೆ.

ಬ್ರ್ಯಾಂಡ್‌ ಬೆಂಗಳೂರು ಯೋಜನೆಯಡಿ ₹694 ಕೋಟಿ ವೆಚ್ಚದಲ್ಲಿ 386.5 ಕಿಮೀ ರಸ್ತೆಗಳ ಡಾಂಬರೀಕರಣ ನಡೆಯುತ್ತಿದ್ದು, ಶೇ 44ರಷ್ಟು ಕೆಲಸ ಪೂರ್ಣಗೊಂಡಿದೆ. ಉಳಿದ ಕೆಲಸವನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

100 ಕೋಟಿ ವೆಚ್ಚದಲ್ಲಿ ‘ಸುರಕ್ಷಾ 75’ ಜಂಕ್ಷನ್ ಸುಧಾರಣಾ ಯೋಜನೆಯ ಶೇ 40ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈಜೀಪುರ ಮೇಲ್ಸೇತುವೆ ಕಾಮಗಾರಿ 2026ರ ಜುಲೈ ಅಂತ್ಯಕ್ಕೆ ಮುಗಿಯಲಿದೆ ಎಂದರು. ಐದು ನಗರ ಪಾಲಿಕೆಗಳ ಕರಡು ವಾರ್ಡ್ ಪುನರ್ ವಿಂಗಡಣೆ ಅಧಿಸೂಚನೆಯನ್ನು ಸೆ.30ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳ ಅವಧಿ ಮುಗಿದಿದೆ. ಪರಿಶೀಲನೆಯ ನಂತರ ಅಂತಿಮ ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ಸೆಂಟ್ರಲ್: 2,319

ಬೆಂಗಳೂರು ಉತ್ತರ: 3,375

ಬೆಂಗಳೂರು ಪೂರ್ವ: 3,325

ಬೆಂಗಳೂರು ಪಶ್ಚಿಮ: 5,530

ಬೆಂಗಳೂರು ದಕ್ಷಿಣ: 3,136

ಬಿ.ಸ್ಮೈಲ್: 239

ಒಟ್ಟು: 17,924 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT