ಮನೆಗಳ ಮುಂದೆ ಕಸ ಸುರಿದಿರುವುದು (ಸಂಗ್ರಹ ಚಿತ್ರ) 
ರಾಜ್ಯ

ಕಸ ಸುರಿಯುವುದನ್ನು ತಪ್ಪಿಸಲು ಸಿಸಿಟಿವಿ ಅಳವಡಿಕೆ: 5 ಲಕ್ಷ ರೂ ದಂಡ ವಸೂಲಿ; ವಿಡಿಯೋ ಮಾಡಿದವರಿಗೆ ನಗದು ಬಹುಮಾನ!

ನಾವು ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದರು ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಮಾಡುವ ಬಗ್ಗೆ ಜನಗಳ ಮನೋಭಾವದ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮನೆ ಬಾಗಿಲಿಗೆ ಕಸ ಸುರಿಯುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಸುದ್ದಿಯಾಗಿತ್ತು. ಅಕ್ಟೋಬರ್ 29 ರಂದು ಈ ಅಭಿಯಾನವನ್ನು ಪ್ರಾರಂಭಿಸಿದ ನಂತರ ಇದುವರೆಗೆ 400 ಉಲ್ಲಂಘನೆಗಳನ್ನು ವರದಿ ಮಾಡಿದೆ.

BSWML ನ ಹಿರಿಯ ಎಂಜಿನಿಯರ್‌ಗಳ ಪ್ರಕಾರ, ನಿವಾಸಿಗಳು ಮತ್ತು ವಾಣಿಜ್ಯ ಸಂಸ್ಥೆಗಳಿಂದ 5 ಲಕ್ಷ ರೂ. ದಂಡವನ್ನು ಸಂಗ್ರಹಿಸಲಾಗಿದೆ. ನಾವು ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದರು ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಮಾಡುವ ಬಗ್ಗೆ ಜನಗಳ ಮನೋಭಾವದ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಪೂರ್ವ ನಗರ ನಿಗಮದ ಕೆಆರ್ ಪುರಂನಲ್ಲಿ ಹಿರಿಯ ನಾಗರಿಕರೊಬ್ಬರು ಕಪ್ಪು ಪಾಲಿಥಿನ್ ಚೀಲದಲ್ಲಿ ಕಸ ಎಸೆಯುವುದನ್ನು ಅಧಿಕಾರಿಗಳು ನೋಡಿ ಹಿಂಬಾಲಿಸಿದರು. ಮಾರ್ಷಲ್‌ಗಳು ಇಡೀ ಕೃತ್ಯವನ್ನು ವೀಡಿಯೊದಲ್ಲಿ ಸೆರೆಹಿಡಿದಿದ್ದಾರೆ, ನಂತರ ಅವರ ಮನೆಯನ್ನು ಸಹ ಪತ್ತೆಹಚ್ಚಲಾಗಿದೆ.

ಕೆಲವೇ ಗಂಟೆಗಳಲ್ಲಿ, BSWML ತಂಡವು ಆಟೋ ಟಿಪ್ಪರ್‌ನಲ್ಲಿ ಕಸದ ರಾಶಿಗಳೊಂದಿಗೆ ಬಂದು ವ್ಯಕ್ತಿಯ ಮನೆಯ ಮುಂದೆ ಅದನ್ನು ಎಸೆದಿದೆ. ಜೊತೆಗೆ ದಂಡವಾಗಿ 2,000 ರೂ.ಗಳನ್ನು ಸಹ ಸಂಗ್ರಹಿಸಿದೆ.

ಮೊದಲ ಬಾರಿಗೆ ಅಪರಾಧ ಎಸಗಿದರೆ ನಿವಾಸಿಗಳಿಗೆ 2,000 ರೂ. ದಂಡ ವಿಧಿಸಲಾಗುವುದ, ಪದೇಪದೇ ಅಪರಾಧ ಎಸಗಿದರೆ 5,000 ರೂ. ದಂಡ ವಿಧಿಸಲಾಗುವುದು. ವಾಣಿಜ್ಯ ಸಂಸ್ಥೆಗಳಿಗೆ ಮೊದಲ ಬಾರಿಗೆ ಅಪರಾಧ ಎಸಗಿದರೆ 25,000 ರೂ ಪದೇಪದೇ ಅಪರಾಧ ಎಸಗಿದರೆ 50,000 ರೂ ಗಳನ್ನು ಘನತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಕಾರ ದಂಡ ವಿಧಿಸಲಾಗುವುದು" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ, ಕಸ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಕಸ ಹಾಕುವುದನ್ನು ತಡೆಯಲು, ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಿಸಿಟಿವಿ ಕ್ಯಾಮೆರಾ ಅಳವಡಿಸಲಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ಚಿತ್ರೀಕರಿಸುವ ಜನರಿಗೆ ನಗದು ಬಹುಮಾನ ನೀಡಲು ಬಿಎಸ್‌ಡಬ್ಲ್ಯೂಎಂಎಲ್ ಯೋಜಿಸುತ್ತಿದೆ. ಈ ಯೋಜನೆ ಬಗ್ಗೆ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಶೀಘ್ರದಲ್ಲೇ ಘೋಷಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ!

ಬಾಂಗ್ಲಾ ಪ್ರಧಾನಿಯಾದ ಬೆನ್ನಲ್ಲೇ ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ, ಆರೋಪ?

ಪಂಜಾಬ್: ಬಟಿಂಡಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ!

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

SCROLL FOR NEXT