ಸಿಎಂ ಸಿದ್ದರಾಮಯ್ಯ 
ರಾಜ್ಯ

ಧರ್ಮ, ಜಾತಿ ಎತ್ತಿ ಕಟ್ಟಿ, ಸಮಾಜ ಒಡೆಯುವವರ ಜೊತೆ ಕೈ ಜೋಡಿಸಬೇಡಿ: ಸಿಎಂ ಸಿದ್ದರಾಮಯ್ಯ

ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಯಾವುದೇ ಧರ್ಮವೂ ಮತ್ತೊಬ್ಬರನ್ನು, ಮತ್ತೊಂದು ಧರ್ಮವನ್ನು ದ್ವೇಷಿಸು ಎಂದು ಹೇಳಿಲ್ಲ.

ಬೆಂಗಳೂರು: ಧರ್ಮ, ಜಾತಿಗಳನ್ನು ಎತ್ತಿ ಕಟ್ಟಿ, ಸಮಾಜವನ್ನು ಒಡೆಯುವವರ ಜೊತೆ ಕೈ ಜೋಡಿಸಬೇಡಿ, ಸಮಾಜ ಘಾತುಕ ಶಕ್ತಿಗಳನ್ನು ದೂರ ಇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಲ್ಲಿ ಮನವಿ ಮಾಡಿದ್ದಾರೆ.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ "ದಾಸಶ್ರೇಷ್ಠ ಕನಕದಾಸ" ಜಯಂತಿಯನ್ನು ಉದ್ಘಾಟಿಸಿ, ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಯಾವುದೇ ಧರ್ಮವೂ ಮತ್ತೊಬ್ಬರನ್ನು, ಮತ್ತೊಂದು ಧರ್ಮವನ್ನು ದ್ವೇಷಿಸು ಎಂದು ಹೇಳಿಲ್ಲ. ಸಹಿಷ್ಣುತೆ, ಸಹಬಾಳ್ವೆ ಎರಡೂ ಮುಖ್ಯ. ಇದನ್ನು ಮನುಷ್ಯ ಕಲಿಯಬೇಕು. ಸಂವಿಧಾನದಲ್ಲಿ ಇದನ್ನು ಸ್ಪಷ್ಟವಾಗಿ ಹೇಳಲಾಗಿದೆ. ಪ್ರೀತಿ, ಸಹಬಾಳ್ವೆ, ಮನುಷ್ಯತ್ವ ಸಾರುವವರ ಮೇಲೆ ನಂಬಿಕೆ ಇಡಿ ಎಂದರು.

ಸಂವಿಧಾನದ ಆಶಯಗಳ ರೀತಿಯಲ್ಲಿ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ಎಲ್ಲ ಸರ್ಕಾರಗಳ ಮೇಲಿದೆ. ಕನಕದಾಸರ ವಿಚಾರ, ಆದರ್ಶಗಳನ್ನು ಮುಂದಿಟ್ಟುಕೊಂಡು ಸಂವಿಧಾನದ ಆಶಯಗಳನ್ನು ಈಡೇರಿಸಬೇಕಾಗಿರುವುದು ಸರ್ಕಾರದ ಹೊಣೆ. ಜಾತಿ ವ್ಯವಸ್ಥೆ ಹೋಗಲಾಡಿಸಬೇಕೆಂದು ಮಹಾಪುರುಷರ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಈ ವ್ಯಕ್ತಿಗಳು ಇಡೀ ದೇಶಕ್ಕೆ ಸಲ್ಲುವವರು. ಇವರಿಗೆ ಜಾತಿ ಇಲ್ಲ ಎಂದು ಹೇಳಿದರು.

ಹಿಂದುಳಿದ ಜಾತಿಯಲ್ಲಿ ಜನಿಸಿದ ಅನೇಕ ಮಹನೀಯರು ಮಹತ್ ಕಾವ್ಯಗಳನ್ನು ರಚಿಸಿದ್ದಾರೆ. ವಾಲ್ಮೀಕಿ ಮಹರ್ಷಿಗಳು ರಾಮಾಯಣ, ವ್ಯಾಸರು ಮಹಾಭಾರತ, ಕಾಳಿದಾಸರು ಶಾಕುಂತಲ ರಚನೆ, ಕನಕದಾಸರು ನಳ ಚರಿತ್ರೆ, ಮೋಹನ ತರಂಗಿಣಿ, ಹರಿಭಕ್ತಿಸಾರದಂತಹ ಕಾವ್ಯ ರಚನೆ ಮಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದರು. ಇದೆಲ್ಲ ವಿದ್ಯೆಯ ಮಹಿಮೆ. ಆದ್ದರಿಂದಲೇ ಸಮಾಜದ ಪ್ರತಿಯೊಬ್ಬರು ಶಿಕ್ಷಣ ಪಡೆಯಲೇಬೇಕು, ವಿಚಾರವಂತರಾಗಲೇಬೇಕು ಎಂದು ತಿಳಿಸಿದರು.

ಕನಕದಾಸರು ಅಧಿಕಾರ, ಅಂತಸ್ತು ತ್ಯಾಗ ಮಾಡಿ ದಾಸಶ್ರೇಷ್ಠರಾದರು. ಸಮಾಜ ಸುಧಾರಣೆಯ ಹಲವು ಮಾರ್ಗಗಳನ್ನು ತೋರಿಸಿಕೊಟ್ಟರು. ಅವರ ಬೋಧನೆಗಳನ್ನು, ವಿಚಾರಧಾರೆಗಳನ್ನು ಪಾಲಿಸುವುದರಲ್ಲಿ ಜಯಂತಿ ಆಚರಣೆಯ ಸಾರ್ಥಕತೆ ಇದೆ. ಇಂತಹ ಎಲ್ಲ ಮಹಾನುಭಾವರ ಜಯಂತಿ ಆಚರಣೆಗಳನ್ನು ಸರ್ಕಾರ ಮಾಡುತ್ತಿರುವುದೂ ಕೂಡಾ ಅವರ ಆದರ್ಶಗಳನ್ನು ಪಾಲಿಸುವ ಉದ್ದೇಶದಿಂದ. ಇದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT