ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಕಾಡಾನೆ ಸಾವು 
ರಾಜ್ಯ

ಬೆಂಗಳೂರು ದಕ್ಷಿಣ: ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ 2 ಕಾಡಾನೆ ಸಾವು

ಕನಕಪುರ ತಾಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಕೂನೂರು ಗ್ರಾಮದ ಬಳಿಯ ಅರ್ಕಾವತಿ ನದಿಯ ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಎರಡು ಕಾಡಾನೆಗಳು ಮುಳುಗಿ ಸಾವನ್ನಪ್ಪಿವೆ.

ಬೆಂಗಳೂರು: ವ್ಯಕ್ತಿಯೋರ್ವನ ಕೊಂದು ಭಾರಿ ಆತಂಕ ಮೂಡಿಸಿದ್ದ ಹುಲಿ ಸೆರೆ ಸುದ್ದಿ ಬೆನ್ನಲ್ಲೇ ಇತ್ತ ರಾಮನಗರದಲ್ಲಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ 2 ಕಾಡಾನೆಗಳು ಸಾವನ್ನಪ್ಪಿವೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಕೂನೂರು ಗ್ರಾಮದ ಬಳಿಯ ಅರ್ಕಾವತಿ ನದಿಯ ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಎರಡು ಕಾಡಾನೆಗಳು ಮುಳುಗಿ ಸಾವನ್ನಪ್ಪಿದ್ದು, ಆಹಾರ ಅರಸಿ ನಾಡಿಗೆ ಬಂದಿದ್ದ ಗಂಡಾನೆಗಳು ನದಿ ದಾಟುವಾಗ ಜೊಂಡಿಗೆ ಸಿಲುಕಿ ಮುಳುಗಿ ಮೃತಪಟ್ಟಿವೆ.

ಸ್ಥಳೀಯರ ಪ್ರಕಾರ, 'ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತ ಏಳು ಗಂಡಾನೆಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ದಿನಗಳ ಕೆಳಗೆ ಕಾಡಿಗೆ ಹಿಮ್ಮೆಟ್ಟಿಸುವ ಕೆಲಸ ಮಾಡಿದ್ದರು. ಈ ವೇಳೆ ಹದಿನೈದರಿಂದ ಇಪತ್ತು ವರ್ಷ ವಯಸ್ಸಿನ ಎರಡು ಗಂಡಾನೆಗಳು ನದಿ ದಾಟಲು ಹೋಗಿ ಜೊಂಡು (ಜಲಸಸ್ಯ) ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಸದ್ಯ ಸಾವನ್ನಪ್ಪಿರುವ ಕಾಡಾನೆಗಳನ್ನು ಸಿಬ್ಬಂದಿ ನದಿಯಿಂದ ಮೇಲೆತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನಡೆಸಲಿದ್ದಾರೆ. ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

'ಒಳನುಸುಳುವಿಕೆ' ಹೇಳಿಕೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ತಿರುಗೇಟು, ರಾಷ್ಟ್ರೀಯ ಭದ್ರತೆ ಲೋಪದ ಪ್ರಶ್ನೆ!

SCROLL FOR NEXT