ಸಾಂದರ್ಭಿಕ ಚಿತ್ರ 
ರಾಜ್ಯ

ಬ್ಯಾಂಕಾಕ್‌ನಿಂದ ಬಂದ ಮೂವರ ಬಂಧನ; ವನ್ಯಜೀವಿ ಪ್ರಬೇಧಗಳು, 1 ಕೋಟಿ ರೂ ಮೌಲ್ಯದ ಗಾಂಜಾ ವಶ

ಬ್ಯಾಂಕಾಕ್‌ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕನನ್ನು ತಡೆದ ಅಧಿಕಾರಿಗಳು, 1.04 ಕೋಟಿ ರೂ. ಮೌಲ್ಯದ 2.990 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಆಗಮಿಸಿದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ಅವರಿಂದ ವಿಲಕ್ಷಣ ವನ್ಯಜೀವಿ ಪ್ರಭೇದಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರು ಕಸ್ಟಮ್ಸ್ 'X' ನಲ್ಲಿನ ಪೋಸ್ಟ್‌ನಲ್ಲಿ, ನವೆಂಬರ್ 9 ರಂದು, ಕೆಐಎ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರನ್ನು ಪರಿಶೀಲನೆ ನಡೆಸಿ, ಬಿಳಿ ಕೆನ್ನೆಯ ಗಿಬ್ಬನ್, ಮಂಕಿ ಮತ್ತು ಹಾರ್ನ್‌ಬಿಲ್ ಸೇರಿದಂತೆ ವಿಲಕ್ಷಣ ವನ್ಯಜೀವಿ ಪ್ರಭೇದಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕರನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಿದೆ.

ಅದೇ ದಿನ, ಬ್ಯಾಂಕಾಕ್‌ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು, 1.04 ಕೋಟಿ ರೂ. ಮೌಲ್ಯದ 2.990 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದೆ.

ನಂತರ, ಪ್ರಯಾಣಿಕನನ್ನು NDPS (ಮಾದಕದ್ರವ್ಯ ಮತ್ತು ಅಮಲು ಪದಾರ್ಥಗಳ ನಿಷೇಧ ಕಾಯ್ದೆ, 1985) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT