ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಆಟವಾಡುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣ ಸಾವು

ಮೃತ ಬಾಲಕರು ಪೋಷಕರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಇಬ್ಬರೂ ಕೂಡ ಮನೆಯ ಹತ್ತಿರವೇ ಆಟ ಆಡಿಕೊಂಡಿದ್ದರು.

ಬೆಂಗಳೂರು: ಆಟವಾಡುತ್ತಿದ್ದಾಗ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿ ಈ ದುರಂತ ನಡೆದಿದ್ದು, ಮೃತ ಬಾಲಕರನ್ನು ಅನಿಕೇತ್ ಕುಮಾರ್ (8) ಹಾಗೂ ರೆಹಮಾತ್ ಬಾಬಾ (11) ಎಂದು ಗುರುತಿಸಲಾಗಿದೆ.

ಬಾಲಕ ಅನಿಕೇತ್ ಕುಮಾರ್ ಪೋಷಕರು ಬಿಹಾರ ಮೂಲದವರಾಗಿದ್ದು, ರೆಹಮಾತ್ ಬಾಬಾ ಪೋಷಕರು ಆಂಧ್ರ ಮೂಲದ ಕದಿರಿ ಮೂಲದವರು ಎಂದು ಹೇಳಲಾಗುತ್ತಿದೆ.

ಮೃತ ಬಾಲಕರು ಪೋಷಕರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಇಬ್ಬರೂ ಕೂಡ ಮನೆಯ ಹತ್ತಿರವೇ ಆಟ ಆಡಿಕೊಂಡಿದ್ದರು. ಆದರೆ, ಆಟ ಆಡುತ್ತಾ ಇಬ್ಬರೂ ಕೆರೆಯ ಬಳಿ ಬಂದಿದ್ದು, ಈ ಸಮಯದಲ್ಲಿ ನೀರನ್ನು ನೋಡಿ ಕೆರೆಗೆ ಇಳಿದಿದ್ದಾರೆ. ಆದರೆ, ಈಜು ಬರದ ಕಾರಣ, ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಏತನ್ಮಧ್ಯೆ ಪೋಷಕರು ಮಕ್ಕಳು ಆಟ ಆಡಿಕೊಂಡು ಸುತ್ತ-ಮುತ್ತಲೇ ಇದ್ದಾರೆ ಎಂದು ಭಾವಿಸಿದ್ದರು. ಆದರೆ ಸಂಜೆ ಆದರೂ ಮಕ್ಕಳು ಮನೆಗೆ ಹಿಂತಿರುಗಿ ಬರದೇ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದಾರೆ. ಬಳಿಕ ಮನೆಯ ಸುತ್ತಮುತ್ತ ಹಾಗೂ ಊರಿನಲ್ಲಿ ಹುಡುಕಾಡಿದ್ದಾರೆ. ಆದರೆ ಎಷ್ಟೇ ಹೊತ್ತಾದರೂ ಮಕ್ಕಳ ಸುಳಿವು ಸಿಕ್ಕಿಲ್ಲ. ಆದರೆ ಇಂದು ಬೆಳಗ್ಗೆ ಕೆರೆಯಲ್ಲಿ ಮಕ್ಕಳ ದೇಹ ತೆಲುತ್ತಿರುವುದು ಪತ್ತೆ ಆಗಿದ್ದು, ತಕ್ಷಣವೇ ಗ್ರಾಮಸ್ಥರು ಅತ್ತಿಬೆಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!