ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಮಹಿಳೆ ಪರಿಚಯ; 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಂಡ ವ್ಯಕ್ತಿ!

ಆರೋಪಿಯನ್ನು ಕವಿಪ್ರಿಯಾ ಎಂದು ಗುರುತಿಸಲಾಗಿದೆ. ಈ ಘಟನೆ ನವೆಂಬರ್ 1 ರಂದು ಬೆಳಗಿನ ಜಾವ 12.30 ರಿಂದ ಬೆಳಿಗ್ಗೆ 7 ಗಂಟೆಯ ನಡುವೆ ನಡೆದಿದೆ.

ಬೆಂಗಳೂರು: ಎರಡು ತಿಂಗಳ ಹಿಂದೆ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಮಹಿಳೆಯೊಬ್ಬರಿಂದ 26 ವರ್ಷದ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದಾರೆ.

ಆರೋಪಿಯನ್ನು ಕವಿಪ್ರಿಯಾ ಎಂದು ಗುರುತಿಸಲಾಗಿದೆ. ಈ ಘಟನೆ ನವೆಂಬರ್ 1 ರಂದು ಬೆಳಗಿನ ಜಾವ 12.30 ರಿಂದ ಬೆಳಿಗ್ಗೆ 7 ಗಂಟೆಯ ನಡುವೆ ನಡೆದಿದೆ. ನಾಗಸಂದ್ರದ ಎಚ್‌ಎಂಟಿ ಲೇಔಟ್‌ನಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸಿಸುತ್ತಿರುವ ಸಂತ್ರಸ್ತ ದೀಪಕ್ (ಹೆಸರು ಬದಲಾಯಿಸಲಾಗಿದೆ) ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಡೇಟಿಂಗ್ ಆ್ಯಪ್‌ನಲ್ಲಿ ಕವಿಪ್ರಿಯಾ ಅವರನ್ನು ಭೇಟಿಯಾದ ನಂತರ, ಅವರು ಫೋನ್ ಸಂಪರ್ಕದಲ್ಲಿದ್ದರು. ಜೊತೆಗೆ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದರು ಎಂದು ದೀಪಕ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಅಕ್ಟೋಬರ್ 31 ರಂದು ಇಂದಿರಾನಗರದಲ್ಲಿ ಅವರು ಭೇಟಿಯಾದರು ಮತ್ತು ಸಂಜೆ 12 ನೇ ಮುಖ್ಯ ರಸ್ತೆಯಲ್ಲಿರುವ ಕಾಕ್‌ಟೈಲ್ ಬಾರ್‌ಗೆ ಇಬ್ಬರೂ ಹೋಗಿದ್ದರು.

ರಾತ್ರಿ ತಡವಾಗಿದ್ದರಿಂದ ತನ್ನ ಪೇಯಿಂಗ್ ಗೆಸ್ಟ್ ವಸತಿಗೃಹಕ್ಕೆ ಹಿಂತಿರುಗಲು ಸಾಧ್ಯವಿಲ್ಲ ಎಂದು ಹೇಳಿದ ಕವಿಪ್ರಿಯಾ ದೀಪಕ್ ನನ್ನು ಹತ್ತಿರದ ಹೋಟೆಲ್‌ಗೆ ಕರೆದೊಯ್ದು ರೂಮ್ ಬುಕ್ ಮಾಡಿದರು. ಇಬ್ಬರು ರಾತ್ರಿ 12.30 ರ ಸುಮಾರಿಗೆ ಊಟ ಮಾಡಿದರು.

ನಂತರ ಆಕೆ ಅವನಿಗೆ ಕುಡಿಯಲು ಕೆಲವು ಮತ್ತು ಬರುವ ಔಷಧಿ ನೀಡಿ ನೀರು ಕೊಟ್ಟಿದ್ದಾಳೆ. ಶೀಘ್ರದಲ್ಲೇ ಆತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬೆಳಿಗ್ಗೆ ಎದ್ದಾಗ ಅವನ ಚಿನ್ನದ ಸರ, ಚಿನ್ನದ ಕಡ (ಬಳೆ), ಹೆಡ್‌ಸೆಟ್ ಮತ್ತು 10,000 ರೂ. ನಗದು ಕಾಣೆಯಾಗಿರುವುದು ತಿಳಿದಿದೆ.

ದೀಪಕ್ ಕವಿಪ್ರಿಯಾಗೆ ಹಲವಾರು ಬಾರಿ ಕರೆ ಮಾಡಿದರೂ ಅವಳು ಪ್ರತಿಕ್ರಿಯಿಸಲಿಲ್ಲ. "ಆ ಮಹಿಳೆ ಅಪರಾಧಿಯಾಗಿದ್ದು, ಅನೇಕ ಪುರುಷರನ್ನು ಬೇರೆ ಬೇರೆ ಹೆಸರುಗಳಲ್ಲಿ ವಂಚಿಸಿರಬೇಕು ಎಂದು ನಮಗೆ ಅನುಮಾನವಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಕಳ್ಳತನ ಮತ್ತು ವಂಚನೆ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಪ್ಸ್ಟೀನ್ ದಾಖಲೆಗಳ ಉಲ್ಲೇಖ, ಹರ್ದೀಪ್ ಪುರಿ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಮಾರ್ಚ್ 9 ರವರೆಗೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಅಭಿನಂದನೆ; ಹೇಳಿದ್ದೇನು?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳಿಗಷ್ಟೇ ತಾತ್ವಿಕ ಒಪ್ಪಿಗೆ, ಸಂಭ್ರಮಾಚರಣೆಗೆ ಬ್ರೇಕ್?: ಪರಮೇಶ್ವರ ಹೇಳಿದ್ದೇನು?

T20 World Cup 2026: ಆಸ್ಟ್ರೇಲಿಯಾ ವಿರುದ್ಧ ಜಿಂಬಾಬ್ವೆಗೆ ಜಯ; 19 ವರ್ಷಗಳಲ್ಲಿ ಮೊದಲ ಬಾರಿಗೆ ಕಾಂಗರೂಗಳನ್ನು ಸೋಲಿಸಿದ ಚೆವ್ರಾನ್‌ಗಳು!

T20 WC: 19 ವರ್ಷಗಳ ನಂತರ ಆಸೀಸ್ ಅನ್ನು ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ: 3ನೇ ಸ್ಥಾನಕ್ಕೆ ಕುಸಿದ Australia!

SCROLL FOR NEXT