ಶಾಸಕ ರಾಜು ಕಾಗೆ  
ರಾಜ್ಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು: ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಪತ್ರ

ರಾಜು ಕಾಗೆ ಪತ್ರದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆಗಳಿಗೆ ಆಗ್ರಹ ವ್ಯಕ್ತವಾಗಿದೆ.

ಬೆಳಗಾವಿ: ಉತ್ತರ ಕರ್ನಾಟಕ ಪ್ರತ್ಯೇಕ ‌ರಾಜ್ಯದ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಇದೀಗ ಆಡಳಿತ ಪಕ್ಷ ಕಾಂಗ್ರೆಸ್ ನ ಶಾಸಕ ರಾಜು ಕಾಗೆಯವರೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಸುದ್ದಿಯಾಗಿದ್ದಾರೆ.

ರಾಜು ಕಾಗೆ ಪತ್ರದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆಗಳಿಗೆ ಆಗ್ರಹ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಇವನ್ನು ಈಡೇರಿಸದಿದ್ದರೆ ಸುವರ್ಣ ವಿಧಾನಸೌಧದ ಮೇಲೆ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಎಚ್ಚರಿಕೆ ನೀಡಲಾಗಿದೆ.

ರಾಜು ಕಾಗೆಯವರ ಪತ್ರದಲ್ಲಿ ಏನಿದೆ?

ಉತ್ತರ ಕರ್ನಾಟಕ‌ ರಾಜ್ಯವನ್ನಾಗಿಸಿ ಎಂದು ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಪತ್ರ ಬರೆದಿರುವ ಶಾಸಕ ರಾಜು ಕಾಗೆ, 15 ಜಿಲ್ಲೆಗಳನ್ನೊಳಗೊಂಡ ಉತ್ತರ ಕರ್ನಾಟಕ‌ ಪ್ರತ್ಯೇಕವಾಗಿಸಲು ಕೋರಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯ ಆಗುತ್ತಿದ್ದು, ಮಲತಾಯಿ ಧೋರಣೆ ತಾರತಮ್ಯ ತೋರಲಾಗುತ್ತಿದೆ.

ಆ ಮೂಲಕ ಉತ್ತರ ಕರ್ನಾಟಕ ಹೋರಾಟ ಸಮಿತಿ ಹೋರಾಟಕ್ಕೆ ಶಾಸಕ ಕಾಗೆ ಬೆಂಬಲ ನೀಡಿದ್ದು, ಚಳಿಗಾಲದ ಅಧಿವೇಶನದಲ್ಲೂ ಈ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ. ದಿವಂಗತ ಉಮೇಶ್ ಕತ್ತಿ ನಿಧನದ ಬಳಿಕ ಆಪ್ತ‌ ಶಾಸಕ ಕಾಗೆಯಿಂದ ಈಗ ಉತ್ತರ ಕರ್ನಾಟಕ‌ ಪ್ರತ್ಯೇಕ ರಾಜ್ಯದ ಕೂಗು ವ್ಯಕ್ತವಾಗಿದೆ.

ಪ್ರತ್ಯೇಕ ರಾಜ್ಯ ಧ್ವನಿ ಎತ್ತಿದ್ದ ಉಮೇಶ್ ಕತ್ತಿ

ದೇಶದಲ್ಲಿ 30 ರಾಜ್ಯಗಳಿವೆ. ಈ ಪೈಕಿ 50 ರಾಜ್ಯಗಳನ್ನಾಗಿ ಮಾಡಬೇಕು ಎನ್ನುವ ಚರ್ಚೆ ಆಗ್ತಿದೆ. ಉತ್ತರ ಪ್ರದೇಶದಲ್ಲಿ 21 ಕೋಟಿ ಜನಸಂಖ್ಯೆ ಇದ್ದು 4 ರಾಜ್ಯವಾಗಬೇಕು. ಮಹಾರಾಷ್ಟ್ರದಲ್ಲಿ 11 ಕೋಟಿ ಜನಸಂಖ್ಯೆ ಇದ್ದು ಅದನ್ನು 3 ರಾಜ್ಯ ಮಾಡಬೇಕು. ಅದರಂತೆ ಕರ್ನಾಟಕ ಆರೂವರೆ ಕೋಟಿ ಜನಸಂಖ್ಯೆ ಇದೆ. ಈ ಹಿನ್ನೆಲೆ ಎರಡು ರಾಜ್ಯಗಳಾಗಿ ವಿಂಗಡಣೆ ಆಗಬೇಕು.

ನಾನು 9 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯವಾಗಬೇಕು. ಮುಂದೆಯೂ ಬಿಜೆಪಿಯಲ್ಲಿಯೇ ಇರುತ್ತೇನೆ. ಬಿಜೆಪಿಯಲ್ಲಿದ್ದು ಮುಖ್ಯಮಂತ್ರಿ ಆಗುವ ಅರ್ಹತೆ ನನಗಿದೆ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ. ಕರ್ನಾಟಕ ಎರಡು ಭಾಗ ಆಗಬೇಕು, ನಾವು ಕೂಡಾ ಕನ್ನಡ ಭಾಷೆಯನ್ನೇ ಮಾತನಾಡುತ್ತೇವೆ. ನಾವು ಅಚಲ ಕನ್ನಡಿಗರು ಎಂದು ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಹೇಳಿದ್ದು ಭಾರೀ ಸುದ್ದಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT