ಸಿದ್ದರಾಮಯ್ಯ 
ರಾಜ್ಯ

ಭಾರತ ಬಹುತ್ವದ ರಾಷ್ಟ್ರ, ಎಂದಿಗೂ 'ಹಿಂದೂ' ರಾಷ್ಟ್ರ ಆಗಲ್ಲ- ಸಿಎಂ ಸಿದ್ದರಾಮಯ್ಯ

ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ ಆಗುವುದಿಲ್ಲ

ಮೈಸೂರು: ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ ಆಗುವುದಿಲ್ಲ ಎಂದು ಹೇಳಿದರು.

ಇನ್ನು ಜಿ.ಟಿ.ದೇವೇಗೌಡರನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೈ ಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷಕ್ಕೆ ಸೇರಿದ್ದು, ನಾನು ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವುದಿಲ್ಲ. ಬಂದರೆ ಯಾಕೆ ಬಂದ್ರಿ ಎಂದು ಕೇಳುವುದಿಲ್ಲ. ಅದು ಅವರವರಿಗೆ ಬಿಟ್ಟದ್ದ. ನಾನು ಜಿ.ಟಿ ದೇವೇಗೌಡ ಒಂದೇ ಕ್ಷೇತ್ರದವರು. ಹೀಗಾಗಿ ಸ್ನೇಹ ಇದೇ ಅಷ್ಟೇ ಎಂದರು.

ನವೆಂಬರ್ 15ಕ್ಕೆ ದೆಹಲಿಗೆ ಹೋಗುತ್ತೇನೆ. ಕಪಿಲ್ ಸಿಬಲ್ ಅವರ ಕಾರ್ಯಕ್ರಮ ಇದೆ. ಅದಕ್ಕಾಗಿ ದೆಹಲಿಗೆ ಹೋಗುತ್ತೇನೆ. ಅವತ್ತೇ ಹೋಗಿ ಅವತ್ತೇ ವಾಪಸ್ ಬರುವ ಯೋಜನೆ ಇದೆ. ರಾಹುಲ್ ಗಾಂಧಿ ಅವರ ಬಳಿ ಸಮಯ ಕೇಳಿದ್ದೇನೆ. ಸಮಯ ಕೊಟ್ಟರೆ ಅಲ್ಲೇ ಉಳಿದುಕೊಂಡು ಮರುದಿನ ಬರುತ್ತೇನೆ. ರಾಹುಲ್ ಗಾಂಧಿ ಸಮಯ ಕೊಟ್ಟರೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡುತ್ತೇನೆ. ಇಲ್ಲದಿದ್ದರೆ ಇಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

VB-G RAM G ಕುರಿತು ಚರ್ಚೆಗೆ ವಿಶೇಷ ಅಧಿವೇಶನ: ಬಿಜೆಪಿ, ಜೆಡಿಎಸ್ ಸ್ವಾಗತ

I-PAC raids: ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ ಪೊಲೀಸ್ ತನಿಖೆ ಆರಂಭ; ಬಂಗಾಳ ಸರ್ಕಾರದಿಂದ ಸುಪ್ರೀಂಗೆ ಕೇವಿಯಟ್ ಸಲ್ಲಿಕೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ?; IMD ಎಚ್ಚರಿಕೆ

SCROLL FOR NEXT